ಹಳ್ಳಿಯಲ್ಲಿ ಪಕ್ಷ ಸಂಘಟೆ ಮಾಡಿದ ಬಿಜೆಪಿ ನಾಯಕ ಈಗ ದಿಲ್ಲಿ ಪ್ರತಿನಿಧಿ...!

Published : Aug 30, 2020, 10:59 PM ISTUpdated : Aug 30, 2020, 11:06 PM IST
ಹಳ್ಳಿಯಲ್ಲಿ ಪಕ್ಷ ಸಂಘಟೆ ಮಾಡಿದ ಬಿಜೆಪಿ ನಾಯಕ ಈಗ ದಿಲ್ಲಿ ಪ್ರತಿನಿಧಿ...!

ಸಾರಾಂಶ

ಬೆಳಗಾವಿ ಬಿಜೆಪಿ ಮುಖಂಡ ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು, ಇದೀಗ ಇವರಿಗೆ ಮತ್ತೆ ಬಿಎಸ್‌ವೈ ಸರ್ಕಾರ ಉನ್ನತ ಹುದ್ದೆ ನೀಡಿದೆ.

ಬೆಂಗಳೂರು, (ಆ.30): ಹಳ್ಳಿಯಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಶಂಕರಗೌಡ ಪಾಟೀಲ್ ಈಗ ದೆಹಲಿ ಮುಟ್ಟಿದ್ದಾರೆ.

ಹೌದು... ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಇದೀಗ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.

ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು (ಭಾನುವಾರ) ಆದೇಶ ಹೊರಡಿಸಿದೆ.

ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಪ್ರಧಾನಿ ಮೋದಿ ಶಹಬ್ಬಾಶ್..!

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ರಾಜ್ಯ ಸರ್ಕಾರ, ಹಿಂದಕ್ಕೆ ಪಡೆದು  ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಿದೆ.

ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಅಧಿಕಾರಕ್ಕೆ ಬಂದಾಗ ಅನೇಕ ಹುದ್ದೆಗಳನ್ನು ಪಡೆದುಕೊಂಡಿದ್ದರು,ಬೆಳಗಾವಿ ಬುಡಾ ಅದ್ಯಕ್ಚ, ಅರಣ್ಯ ನಿಗಮದ ಅದ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಮಾಡಿರುವ ಶಂಕರಗೌಡ ಪಾಟೀಲರು ಈಗ ಕರ್ನಾಟಕ ಸರ್ಕಾರದ ದೇಹಲಿಯ ವಿಶೇಷ ಪ್ರತಿನಿಧಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ
ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ