
ಬಳ್ಳಾರಿ(ಜ.16): ಸಂವಿಧಾನದತ್ತ ಜನಾದೇಶದ ವಿರುದ್ಧ ಯಾರೇ ನಡೆದುಕೊಂಡರೂ ಅದು ಅಕ್ಷಮ್ಯ ಅಪರಾಧ ಎಂದು ಬಳ್ಳಾರಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚೆನೆ ಮಾಡಿ ಆಡಳಿತ ನಡೆಸುತ್ತಿದೆ. ಬಿಜೆಪಿಯವರಿಗೆ ಈ ರಾಜ್ಯದಲ್ಲಿ ಜನಾದೇಶ ಇಲ್ಲ. ಆದರೂ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡು ಎಂದು ಉಗ್ರಪ್ಪ ಹರಿಹಾಯ್ದಿದ್ದಾರೆ.
2004, 2008ರಲ್ಲೂ ಬಿಜೆಪಿ ವಾಮ ಮಾರ್ಗ ಅನುಸರಿಸಿ ಅಧಿಕಾರ ಹಿಡಿಯಲು ಪ್ರಯತ್ನಿಸಿತ್ತು. ಆದರೆ ನಮ್ಮ ಪಕ್ಷದ ಶಾಸಕರು ಬಿಜೆಪಿ ಜೊತೆ ಹೋಗುವುದಿಲ್ಲ ಎಂಬ ಭರವಸೆ ಇದೆ ಎಂದು ಉಗ್ರಪ್ಪ ಹೇಳಿದ್ದಾರೆ.
ಆನಂದ್ ಸಿಂಗ್ ತಮ್ಮ ಬಳಿ ಮಾತನಾಡಿದ್ದು, ಗಣೇಶ್, ಭೀಮಾನಾಯ್ಕ್ ಕೂಡ ಮೊನ್ನೆ ತಮ್ಮನ್ನು ಭೇಟಿ ಮಾಡಿದ್ದರು. ಅತೃಪ್ತ ಪಕ್ಷೇತರ ಶಾಸಕ ನಾಗೇಂದ್ರ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಅವರನ್ನು ಮನವೋಲಿಸುವ ವಿಶ್ವಾಸ ಇದೆ ಎಂದು ಸಂಸದರು ಭರವಸೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮಾಧ್ಯಮದೊಂದಿಗೆ ಮೋದಿ ಪತ್ರಿಕಾಗೋಷ್ಠಿ ನಡೆಸಲ್ಲ. ಆದರೆ ಅನ್ಯ ಪಕ್ಷಗಳ ಶಾಸಕರನ್ನು ಸೆಳೆಯುವ ರೆಸಾರ್ಟ್ ರಾಜಕೀಯ ಮಾಡುತ್ತಾರೆ ಎಂದು ಉಗ್ರಪ್ಪ ವ್ಯಂಗ್ಯವಾಡಿದರು.
ಈ ದೇಶದ ಜನ ಮೋದಿ, ಶಾ ಮಕ್ತ ಭಾರತ ಮಾಡಲು, ರಾಜ್ಯದ ಜನ ಯಡಿಯೂರಪ್ಪ ಮುಕ್ತ ಕರ್ನಾಟಕ ಮಾಡಲು ತಿರ್ಮಾನ ಮಾಡಿದ್ದಾರೆ- ಆಪರೇಷನ್ ಸಂಕ್ರಾಂತಿಯನ್ನು ಬಿಜೆಪಿ ನಿಲ್ಲಿಸದೇ ಹೋದರೇ, ಜನ ಈ 2019 ರಲ್ಲಿ ಇವರನ್ನು ಜನತೆ ಮನೆಗೆ ಕಳುಹಿಸುತ್ತಾರೆ ಎಂದು ಉಗ್ರಪ್ಪ ಈ ವೇಳೆ ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.