'ಕುಂಬಳಕಾಯಿ ಕಳ್ಳ ಅಂದ್ರೆ ಕುಮಾರಸ್ವಾಮಿ ಏಕೆ ಹೆಗಲು ಮುಟ್ಟಿಕೊಳ್ಬೇಕು?'

Published : Mar 07, 2021, 05:00 PM IST
'ಕುಂಬಳಕಾಯಿ ಕಳ್ಳ ಅಂದ್ರೆ ಕುಮಾರಸ್ವಾಮಿ ಏಕೆ ಹೆಗಲು ಮುಟ್ಟಿಕೊಳ್ಬೇಕು?'

ಸಾರಾಂಶ

ಬಳ್ಳಾರಿ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಗೆ ತಿರುಗೇಟು ಕೊಟ್ಟಿದ್ದಾರೆ.

ಬಾಗಲಕೋಟೆ, (ಮಾ.07): ಎಚ್‌.ವೈ. ಮೇಟಿ ರಾಸಲೀಲೆ ಸಿ.ಡಿ.ರಿಲೀಸ್ ಮಾಡಿ ರಾಜ್ಯಾಧ್ಯಂತ ಸುದ್ದಿಯಾಗಿದ್ದ ಬಳ್ಳಾರಿ ಸಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಮತ್ತೆ ಸುದ್ದಿಯಾಗಿದ್ದಾರೆ.

ಹೌದು...ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು ಮುಲಾಲಿ, ನನ್ನ ಬಳಿ ಹಲವರ ಸಿ.ಡಿ. ಇವೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದರು.

ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ರು. ಅಲ್ಲದೇ ಸಿ.ಡಿ. ಇಟ್ಟುಕೊಂಡು ಹೆದರಿಸುತ್ತಿರುವವರನ್ನು ಬಂಧಿಸಿ ಎರೋಪ್ಲೇನ್ ಹತ್ತಿಸಬೇಕು ಅಂತೆಲ್ಲಾ ಹೇಳಿಕೆ ಕೊಟ್ಟಿದ್ದರು. ಇದೀಗ ಇದಕ್ಕೆ ರಾಜಶೇಖರ್ ಮುಲಾಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕುಮಾರಸ್ವಾಮಿಗೆ ತಿರುಗೇಟು ಕೊಟ್ಟಿದ್ದಾರೆ.

MLA,MP ಸೇರಿದಂತೆ ಹಲವರ ಸಿ.ಡಿ. ಇವೆ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ

ಬಾಗಲಕೋಟೆಯಲ್ಲಿ ಈ ಬಗ್ಗೆ ಇಂದು (ಭಾನುವಾರ) ಮಾತನಾಡಿದ ಮುಲಾಲಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಏಳು ಜನ ಇದ್ದಾರೆ. ಅದರಲ್ಲಿ ಒಬ್ಬರು ಪದೇ ಪದೇ ವಯಾನಾಡಿಗೆ ಹೋಗುತ್ತಾರೆ ಎಂದು ನಾನು ಹೇಳಿದ್ದು ನಿಜ. ಆದರೆ, ಕುಂಬಳಕಾಯಿ ಕಳ್ಳ ಅಂದರೆ ಕುಮಾರಸ್ವಾಮಿ ಯಾಕೆ, ಹೆಗಲು ಮುಟ್ಟಿಕೊಳ್ಳಬೇಕು ಎಂದು ಪ್ರಶ್ನಿಸಿದರು.

ಇನ್ನೂ ಆರು ಜನ ಸಿಎಂಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕುಮಾರಸ್ವಾಮಿ ಮಾತ್ರ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ. ಹೋರಾಟಗಾರರು ಎಂದರೆ ಕೇವಲವಾಗಿ ಕಾಣಬೇಡಿ. ಗೌರವದಿಂದ ಮಾತನಾಡಬೇಕು ಎಂದರು. 

ನಾನು ಮಾಜಿ ಮುಖ್ಯಮಂತ್ರಿಗಳು ಎಂದು ಗೌರವದಿಂದ ಕರೆದಿದ್ದೇನೆ. ಆದರೆ, ಕುಮಾರಸ್ವಾಮಿ, ಬಂಧಿಸಬೇಕು, ಎರೋಪ್ಲೇನ್ ಹತ್ತಿಸಬೇಕೆಂದು ಹೇಳಿದ್ದಾರೆ. ನಾವೇನು ಚಿತ್ರ ನಟಿಯನ್ನು ಮದುವೆಯಾಗಿಲ್ಲ. ಬಳಿಕ ನಟಿಯನ್ನು ಕೈಬಿಟ್ಟು ಬೇರೊಬ್ಬರನ್ನು ಮದುವೆಯಾಗಿಲ್ಲ. ಹೋರಾಟಗಾರರೆಂದರೆ ಏನು ಎಂದು ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!