ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರೋಪಿಗಳಿಗೆ ಜಾಮೀನು

Published : Jun 08, 2021, 10:15 PM ISTUpdated : Jun 08, 2021, 10:43 PM IST
ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರೋಪಿಗಳಿಗೆ ಜಾಮೀನು

ಸಾರಾಂಶ

* ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ CD ಬ್ಲ್ಯಾಕ್‌ಮೇಲ್ ಆರೋಪ‌ ಪ್ರಕರಣ * ರಮೇಶ್ ಜಾರಕಿಹೊಳಿ ವಿರುದ್ಧದ CD ಕೇಸ್ ​ ಆರೋಪಿಗಳಿಗೆ ಸಿಕ್ತು ಜಾಮೀನು * ಜಾಮೀನು ನೀಡಿದ  ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ 


ಬೆಂಗಳೂರು, (ಜೂನ್.08): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ಪ್ರಕರಣದ ಶಂಕಿತ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರೆತಿದೆ.

 ಆರೋಪಿಗಳಾದ ನರೇಶ್​​ ಗೌಡ ಹಾಗೂ ಶ್ರವಣ್​ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಇಂದು (ಮಂಗಳವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸೀಡಿ ಕೇಸ್‌ : ಆರೋಪಿಗಳ ಜಾಮೀನಿಗೆ ಆಕ್ಷೇಪ ಸಲ್ಲಿಸಲು ಎಸ್‌ಐಟಿ ಸಿದ್ಧತೆ

ಎರಡು ಕಡೆಯ ವಾದ-ಪ್ರತಿವಾದವನ್ನ ದಾಖಲಿಸಿಕೊಂಡಿದ್ದ ನ್ಯಾಯಾಧೀಶ ಲಕ್ಷ್ಮಿನಾರಾಯಣ್‌ ಭಟ್‌ ನೇತೃತ್ವದ ಪೀಠ ಜಾಮೀನು ನೀಡಿದೆ. ಆರೋಪಿಗಳಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿರುವ 91ನೇ ಸಿಸಿಹೆಚ್ ಕೋರ್ಟ್,  ಬೆಂಗಳೂರು ಬಿಟ್ಟು ಹೋಗುವಂತಿಲ್ಲ, ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಇಬ್ಬರಿಗೂ ಶ್ಯೂರಿಟಿ ನೀಡಲು ಸೂಚನೆ ನೀಡಿದೆ.

ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿತ್ತು. ಬಳಿಕ ಇದೊಂದು ಬ್ಲ್ಯಾಕ್‌ಮೇಲ್ ಎಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕಟಣವನ್ನು ತನಿಖೆ ವೇಳೆ ಪೊಲೀಸರು ನರೇಶ್​​ ಗೌಡ ಹಾಗೂ ಶ್ರವಣ್​ ಅವರನ್ನ ಬಂಧಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ