
ಬೆಂಗಳೂರು, (ಜೂನ್.24): ರಾಜಕೀಯ ವಿದ್ಯಾಮನಗಳ ಬಗ್ಗೆ ಚರ್ಚೆ ಮಾಡುವ ಕೇಂದ್ರ ಸ್ಥಾನವಾಗಿದ್ದ ಕೆಕೆ ಗೆಸ್ಟ್ ಹೌಸ್( ಕುಮಾರ ಕೃಪ ಅತಿಥಿ ಗೃಹ) ಕೋವಿಡ್19 ಕೇರ್ ಸೆಂಟರ್ ಆಗಿ ಬದಲಾಗಲಿದೆ.
ಕೆ.ಕೆ ಗೆಸ್ಟ್ ಹೌಸ್ನ ಒಂದು ನಿಗದಿತ ವಿಭಾಗದಲ್ಲಿ 100 ಕೊಠಡಿಗಳನ್ನ ಕೋವಿಡ್ ಕೇರ್ ಸೆಂಟರ್ನಂತೆ ಕಾರ್ಯ ನಿರ್ವಹಿಸಲು ರಾಜ್ಯ ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
ಈ ಕೊಠಡಿಗಳಲ್ಲಿ ಸಂಸದರು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸರ್ಕಾರದ ಕಾರ್ಯದರ್ಶಿ ಶ್ರೇಣಿಗಿಂತ ಮೇಲಿನ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ಕೊರೋನಾ ನಿಯಂತ್ರಣಕ್ಕೆ ಚೆನ್ನೈ ಮಾಸ್ಟರ್ ಪ್ಲಾನ್; ಬೆಂಗಳೂರು ಕಲಿಬೇಕಾದ್ದು ಬಹಳ ಇದೆ!
ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕೋವಿಡ್19 ಪ್ರಕರಣಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಇದನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸರ್ಕಾರ, ಈಗಾಗಲೇ ಹಲವು ಕೊರೋನಾ ಕೇರ್ ಸೆಂಟರ್ಗಳು, ಕೋವಿಡ್ ಹೆಲ್ತ್ ಸೆಂಟರ್ ಹಾಗೂ ನಿಗದಿತ ಆಸ್ಪತ್ರೆಗಳನ್ನ ಸ್ಥಾಪಿಸಿ ಕಾರ್ಯನಿರ್ವಹಿಸಲಾಗುತ್ತಿದೆ.
ಈಗಿರುವ ಸೋಕಿನ ಪ್ರಸರಣ ಮೇಲೆ ಮುಂಬರುವ ದಿನಗಳಲ್ಲಿ ಕೊರೋನಾ ಸೊಂಕಿನ ಕೇಸ್ ಹೆಚ್ಚಾಗುವ ಸಾಧ್ಯತೆಗಳಿವೆ. ಇದರ ಮಧ್ಯೆ ಕಾರ್ಯನಿರ್ವಹಿಸುವ ಚುನಾಯಿತ ಪ್ರತಿನಿಧಿ, ಮಂತ್ರಿ, ಸರ್ಕಾರ ಉನ್ನತ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಗೂ ಸಹ ಸೋಂಕು ತಗುಲುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇವರುಗಳ ಚಿಕಿತ್ಸೆಗಾಗಿ ಕುಮಾರ ಕೃಪ ಅತಿಥಿ ಗೃಹದ ಒಂದು ಭಾಗವನ್ನು ಕೋವಿಡ್ ಕೇರ್ ಸೆಂಟರ್ ಗುರುತಿಸಿ ಈ ಅಧಿಸೂಚನೆಯನ್ನ ಹೊರಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.