ಬೆಂಗಳೂರು ಗಲಭೆ: ಕೊನೆಗೂ ದೂರು ದಾಖಲಿಸಿದ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ

Published : Aug 14, 2020, 09:04 PM IST
ಬೆಂಗಳೂರು ಗಲಭೆ: ಕೊನೆಗೂ ದೂರು ದಾಖಲಿಸಿದ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ

ಸಾರಾಂಶ

ಬೆಂಗಳೂರು ಗಲಭೆ ನಡೆದ ಮೂರು ದಿನದ ಬಳಿಕ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.ಯಾರ ವಿರುದ್ಧ ?

ಬೆಂಗಳೂರು, (ಆ.14): ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ತಮ್ಮ ಮನೆ ಸುಟ್ಟಿರುವುದರಿಂದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೊನೆಗೂ ದೂರು ದಾಖಲಿಸಿದ್ದಾರೆ.

ಆ.11ರಂದು ಗಲಭೆಕೋರರು ಕಾವಲ್ ಭೈರಸಂದ್ರದಲ್ಲಿರುವ ನಮ್ಮ ಮನೆಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. ಕಾರು ಮತ್ತು ದಾಖೆಗಳನ್ನು ನಾಶ ಮಾಡಿದ್ದಾರೆ. ಅಲ್ಲದೇ  ಮನೆಯಲ್ಲಿದ್ದ ಹಣ, ಚಿನ್ನಾಭರಣ ಕದ್ದಿದ್ದಾರೆ. ಇದರಿಂದ 3 ಕೋಟಿ ರೂಪಾಯಿ ನಷ್ಟವಾಗಿದ್ದು, ಆರೋಪಿಗಳನ್ನ ಪತ್ತೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. 

ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

ದೂರಿನಲ್ಲಿ ಆರೋಪಿತರ ಹೆಸರನ್ನು ಉಲ್ಲೇಖಿಸಿಲ್ಲ. ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಅಪರಿಚಿತ ಗುಂಪು ಎಂದಷ್ಟೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಷ್ಟೇ ಆಲ್ಲದೇ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅವರನ್ನು ಭೇಟಿ ಮಾಡಿ ತನ್ನ ಕುಟುಂಬಕ್ಕೆ ಹೆಚ್ಚಿನ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ (ಅಳಿಯ) ನವೀನ್ ಎನ್ನುವಾತ ಫೇಸ್‌ಬಕ್‌ನಲ್ಲಿ ಪೈಗಂಬರ್ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದಾನೆಂದು  ಆ.11ರ ರಾತ್ರಿ ಏಕಾಏಕಿ ಮನೆಗೆ ನುಗ್ಗಿದ ಉದ್ರಿಕ್ತ ಗುಂಪು, ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಹೊಡೆದು ಹಾಕಿ, ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!