ದಿಟ್ಟ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ: SDPI, PFI ಸಂಘಟನೆಗಳಿಗೆ ಕುತ್ತು...!

Published : Aug 14, 2020, 02:44 PM ISTUpdated : Aug 14, 2020, 05:21 PM IST
ದಿಟ್ಟ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ: SDPI, PFI ಸಂಘಟನೆಗಳಿಗೆ ಕುತ್ತು...!

ಸಾರಾಂಶ

ರಾಜ್ಯಲ್ಲಿ ಎಸ್‌ಡಿಪಿಐ ನಿಷೇಧಿಸಲು ರಾಜ್ಯ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಈ ಬಗ್ಗೆ ಸಚಿವ ಅಶೋಕ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು, (ಆ.14): ರಾಜ್ಯದಲ್ಲಿ  ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಲು ಬಿಜೆಪಿ ಈ ಹಿಂದೆ ಹೋರಾಟ ಮಾಡಿತ್ತು. ಇದೀಗ ಬೆಂಗಳೂರು ಗಲಭೆ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಈ ಸಂಘಟನೆಗಳನ್ನ ಬ್ಯಾನ್‌ ಮಾಡಲು ಚಿಂತನೆ ನಡೆಸಿದೆ.

"

ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗಲಭೆ ಸಂಬಂಧ ಗೃಹ ಸಚಿವರ ಜತೆ ಸಮಾಲೋಚನೆ ಮಾಡಲಾಗಿದೆ. ಎಸ್​ಡಿಪಿಐ ನಿಷೇಧದ ಬಗ್ಗೆ ಒಂದು ಹೆಜ್ಜೆ ಮುಂದೆ ಇಡಲಾಗಿದೆ. ಗೃಹ ಇಲಾಖೆಯಿಂದ ಎಸ್​ಡಿಪಿಐ ಕೃತ್ಯಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ಎಸ್​ಡಿಪಿಐ ಹಾಗೂ ಪಿಎಫ್​ಐ ನಿಷೇಧ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ, ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದ್ರೂ ಏಕೆ SDPI ಬ್ಯಾನ್ ಮಾಡ್ತಿಲ್ಲ: ಸತ್ಯಾಂಶ ಬಿಚ್ಚಿಟ್ಟ ಮಾಜಿ ಸಚಿವ

ಡಿಜೆ ಹಳ್ಳಿ ಪ್ರಕರಣ ಕೋಮುಗಲಭೆಯಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಪಾಲಿಕೆ ಸದಸ್ಯರ ನಡುವಿನ ಮುಸುಕಿನ ಗುದ್ದಾಟದಿಂದ ದೊಂಬಿ ಉಂಟಾಗಿದೆ. ಇದರಲ್ಲಿ ಎಸ್​ಡಿಪಿಐ ಕೈವಾಡವೂ ಇದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದರು.

ಬೆಂಗಳೂರು ಗಲಭೆಯ ಪ್ರಕರಣದಲ್ಲಿ ಎಸ್‌ಡಿಪಿಗೆ ನೇರ ಸಂಬಂಧ ಇದೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಮುಖಂಡರ ಹತ್ಯೆಯಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐನ ಕೈವಾಡ ಇದ್ದು, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ. ಇದರಿಂದ ಈ ಸಂಘಟನೆ ನಿಷೇಧಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌
ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ