ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್

Published : Jul 08, 2021, 04:57 PM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್

ಸಾರಾಂಶ

* ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ * ಸಿಎಂಗೆ ರಿಲೀಫ್ ನೀಡಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ * ಯಡಿಯೂರಪ್ಪ ಕುಟುಂಬದ ವಿರುದ್ಧದ ಖಾಸಗಿ ದೂರು ವಜಾ  

ಬೆಂಗಳೂರು, (ಜುಲೈ.08): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ  ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. 

ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಆದೇಶ ಕೋರಿ ಆಂಟಿ-ಗ್ರಾಫ್ಟ್ ಮತ್ತು ಎನ್ವಿರಾನ್ಮೆಂಟಲ್ ಫೋರಂ ಅಧ್ಯಕ್ಷ ಟಿ.ಜೆ. ಅಬ್ರಹಾಂ ಅವರು ದೂರು ದಾಖಲಿಸಿದ್ದರು. 

'ಹೈಕಮಾಂಡ್‌ಗೆ ಇಂಟೆಲಿಜೆನ್ಸಿ ರಿಪೋರ್ಟ್ ಇದೆ, ಸಿಎಂ ಬದಲಾವಣೆ ಪಕ್ಕಾ 

ಸಿಎಂ ಯಡಿಯೂರಪ್ಪ, ಅವರ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ, ಸೊಸೆ ವಿರೂಪಾಕ್ಷಪ್ಪ ಯಮಕನಮರಡಿ, ಯಡಿಯೂರಪ್ಪ ಅವರ ಪುತ್ರ ಸಂಜಯ್ ಶ್ರೀ, ಪದ್ಮಾವತಿ ಅವರ ಪುತ್ರ ಸಂಜಯ್ ಶ್ರೀ ಮತ್ತು ಇತರರ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು.

ಯಡಿಯುರಪ್ಪ ಅವರ ಕುಟುಂಬವು ಕೋಟ್ಯಂತರ ರೂಪಾಯಿಗಳ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದು, ಅಕ್ರಮದ ಆದಾಯವನ್ನು ಕೊಲ್ಕತ್ತಾ ಮೂಲದ ಕೆಲವು ಶೆಲ್ ಕಂಪನಿಗಳ ಮೂಲಕ ಕೋಲ್ಕತ್ತಾಗೆ ಯಡಿಯುರಪ್ಪ ಅವರ ಕುಟುಂಬ ಸದಸ್ಯರ ಒಡೆತನದ ಕಂಪನಿಗಳಿಗೆ ರವಾನಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದರು.

ವಾದಗಳನ್ನು ಆಲಿಸಿದ ನಂತರ ಆದೇಶಗಳನ್ನು ಕಾಯ್ದಿರಿಸಿದ್ದ ನ್ಯಾಯಾಲಯ ಗುರುವಾರ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಬಿಎಸ್‌ವೈಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?