
ಬೆಂಗಳೂರು, (ಮೇ.27): ಯಲಹಂಕ ಮೇಲ್ಸೇತುವೆ ಉದ್ಘಾಟನೆಯನ್ನು ಬಿಬಿಎಂಪಿ ಮುಂದೂಡಿದೆ. ನಾಳೆ ಅಂದ್ರೆ ಮೇ.28ಕ್ಕೆ ಮೇಲ್ಸೇತುವೆ ವೀರ್ ಸಾವರ್ಕರ್ ಹೆಸರಿಟ್ಟು ಉದ್ಘಾಟನೆ ಕಾರ್ಯಕ್ರಮವನ್ನ ನಿಗದಿಪಡಿಸಲಾಗಿತ್ತು.
ಆದ್ರೆ, ಇಂದು (ಬುಧವಾರ) ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್ಡಿ ಕುಮಾರಸ್ವಾಮಿ ಅವರು, ವೀರ್ ಸಾವರ್ಕರ್ ಹೆಸರಿಡಲು ವಿರೋಧಿಸಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿವೆ.
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಸರ್ಕಾರದ ವಿರುದ್ಧ ಮುಗಿಬಿದ್ದ ಮಾಜಿ ಸಿಎಂಗಳು
ಈ ಹಿನ್ನೆಲೆಯಲ್ಲಿ ಏಕಾಏಕಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮೊಟಕುಗೊಳಿಸಿದೆ.ಸಾಮಾನ್ಯ ಸಭೆಯಲ್ಲಿ ಸಾವರ್ಕರ್ ಹೆಸರಿಡಲು ಪ್ರಸ್ತಾಪವಾಗಿದ್ದು, ಇದಕ್ಕೆ ಒಪ್ಪಿಗೆ ದೊರೆತಿತ್ತು.
ಅದರಂತೆ ಮೇ.28ರಂದು ಮೇಲ್ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಬೇಕಿತ್ತು. ಆದ್ರೆ, ಈಗ ಬಿಬಿಎಂಪಿ ಯಾವುದೇ ಹೆಸರು ಇಡದೇ ಮೇಲು ಸೇತುವೆ ಅಂತ ಉದ್ಘಾಟನೆ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ
ಒಟ್ಟಿನಲ್ಲಿ ಪ್ರತಿಪಕ್ಷಗಳ ವಿರೋಧದ ಕಾರಣಕ್ಕೆ ಸದ್ಯಕ್ಕೆ ಯಲಹಂಕ ಮೇಲ್ಸೇಸೇತುವೆಗೆ ಸಾವರ್ಕರ್ ಹೆಸರಿಡುವ ಪ್ರಯತ್ನದಿಂದ ಸರ್ಕಾರ ಹಿಂದೆ ಸರಿದು, ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಂತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.