Kanakapuraಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಬರಲಿದೆ, ಯಾರು ಜಮೀನು ಮಾರಬೇಡಿ: ಡಿಕೆಶಿ

Published : Dec 03, 2023, 12:31 PM IST
Kanakapuraಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಬರಲಿದೆ, ಯಾರು ಜಮೀನು ಮಾರಬೇಡಿ: ಡಿಕೆಶಿ

ಸಾರಾಂಶ

ನಾವೆಲ್ಲಾ ಬೆಂಗಳೂರು ಜಿಲ್ಲೆಗೆ ಸೇರಿದವರಾಗಿದ್ದು ನಿಮ್ಮ ಜಮೀನುಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಬರುವುದರಿಂದ ಯಾವುದೇ ಕಾರಣಕ್ಕೂ ನಿಮ್ಮ ಭೂಮಿಗಳನ್ನು ಮಾರಾಟ ಮಾಡಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕನಕಪುರ (ಡಿ.03): ನಾವೆಲ್ಲಾ ಬೆಂಗಳೂರು ಜಿಲ್ಲೆಗೆ ಸೇರಿದವರಾಗಿದ್ದು ನಿಮ್ಮ ಜಮೀನುಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಬರುವುದರಿಂದ ಯಾವುದೇ ಕಾರಣಕ್ಕೂ ನಿಮ್ಮ ಭೂಮಿಗಳನ್ನು ಮಾರಾಟ ಮಾಡಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಕನಕಪುರ, ಸಾತನೂರು, ಕೋಡಿಹಳ್ಳಿ, ದೊಡ್ಡಆಲಹಳ್ಳಿ ಸೇರಿದಂತೆ ತಾಲೂಕಿನಲ್ಲಿ ಈ ಮೊದಲು ಭೂಮಿಯ ಬೆಲೆ ಎಷ್ಟಿತ್ತು ಈಗ ಎಷ್ಟಿದೆ ಎಂದು ನೀವೆ ಅಂದಾಜು ಮಾಡಿ, ನಾನು ಏನೇನು ಮಾಡಲು ಸಾಧ್ಯ ಆ ಕೆಲಸವನ್ನು ಮಾಡಿದ್ದೇನೆ. ನಾವು ಬೆಂಗಳೂರಿಗೆ ಸೇರಿದವರು ಎಂದ ತಕ್ಷಣ ನಮ್ಮ ವಿರೋಧಿಗಳು ಏನೇನೋ ಮಾಡಿದರು, ವಿರೋಧ ಮಾಡುವ ಜನರು ಮಾಡಲಿ, ನಾವು ಬೆಂಗಳೂರು ಜಿಲ್ಲೆಯವರು. ಸೂಕ್ತ ಕಾಲ ಬರಲಿದ್ದು, ನಾನು ನಿಮ್ಮ ಗೌರವ ಉಳಿಸುವಂತಹ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಎಂದು ಒತ್ತಿ ಹೇಳಿದರು.

ಕೆಲಸ ಮತ್ತು ವಿದ್ಯಾಭ್ಯಾಸದ ನಿಮಿತ್ತ ಬಹಳಷ್ಟು ಮಂದಿ ನಿತ್ಯ ಬೆಂಗಳೂರಿಗೆ ಓಡಾಡುತಿದ್ದೇವೆ. ಹಾರೋಹಳ್ಳಿವರೆಗೂ ಬರುತ್ತಿರುವ ಬಿಎಂಟಿಸಿ ಬಸ್ ಅನ್ನು ಕನಕಪುರದವರೆಗೂ ವಿಸ್ತರಿಸುವಂತೆ, ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ಇಲ್ಲದೆ ಪರದಾಡುತ್ತಿದ್ದು, ನಮ್ಮ ವಿಧ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ಕನಿಷ್ಠ 20 ಬಸ್ ಗಳ ಸಂಚಾರ ವ್ಯವಸ್ಥೆ ಮಾಡಿ ಎಂದು ಸರ್ಕಾರಿ ಪದವಿ ಪೂರ್ವ, ಪದವಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಆಸ್ತಿಗಳ ಡಿಜೀಟಲೀಕರಣ ಯೋಜನೆ ಕನಕಪುರಕ್ಕೆ ವಿಸ್ತರಣೆ: ಡಿ.ಕೆ.ಶಿವಕುಮಾರ್

ಊಟವಿಲ್ಲದೆ ಪರದಾಡಿದ ಜನತೆ: ಕನಕಪುರದಲ್ಲಿ ಶನಿವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಹವಾಲುಗಳನ್ನು ಸಲ್ಲಿಸಲು ಆಗಮಿಸಿದ್ದ ಜನತೆಗೆ ಮಧ್ಯಾಹ್ನ ಊಟದ ವ್ಯವಸ್ಥೆಯನ್ನ ಮಾಡಿದ್ದರೂ, ನಿರೀಕ್ಷೆಗೂ ಮೀರಿದ ಜನತೆ ಸಭೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಊಟದ ಅಭಾವ ಉಂಟಾಯಿತು. ಇದರಿಂದ ರೋಷಗೊಂಡ ರೈತರು, ಮಹಿಳೆಯರು ಕೈಯಲ್ಲಿ ತಟ್ಟೆ ಹಿಡಿದು ಕಾರ್ಯಕ್ರಮದ ಆಯೋಜಕರಿಗೆ ಹಿಡಿ ಶಾಪವನ್ನು ಹಾಕಿದ್ದು ಕಂಡುಬಂದಿತ್ತು‌.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ