
ಕಾರವಾರ : ಶಾಸಕರಾದ ಇಕ್ಬಾಲ್ ಹುಸೇನ್, ಗಣಿಗ ರವಿಕುಮಾರ್, ಶಿವಗಂಗಾ ಬಸವರಾಜ್ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾರವಾರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಡಿಕೆಶಿ, ಸುದ್ದಿಗಾರರ ಜೊತೆ ಮಾತನಾಡಿದರು. ಅಧಿಕಾರ ಹಸ್ತಾಂತರ ಕುರಿತಂತೆ ಯಾವುದೇ ಹೇಳಿಕೆಗಳನ್ನು ಬಹಿರಂಗವಾಗಿ ನೀಡದೆ ಬಾಯಿ ಮುಚ್ಚಿಕೊಂಡಿರುವಂತೆ ತಮ್ಮ ಆಪ್ತ ಶಾಸಕರಿಗೆ ಖಡಕ್ ಸೂಚನೆ ನೀಡಿದರು. ಇದೇ ವೇಳೆ, ಶಾಸಕರ ವಿದೇಶ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರವಾಸಕ್ಕೆ ಹೋದವರೆಲ್ಲ ನಮ್ಮವರೇ ಆಗಿದ್ದಾರೆ. ಅವರು ಮರಳಿದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಉತ್ತರ ಕನ್ನಡದ ಯುವಕರು ಉದ್ಯೋಗ ಅರಸಿ ಗೋವಾ, ಮುಂಬಯಿ ಅಥವಾ ವಿದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು, ಕರಾವಳಿಯ 334 ಕಿ.ಮೀ. ಉದ್ದದ ಪ್ರದೇಶದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹೊಸ ‘ಕರಾವಳಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ವಿಪುಲ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಕಾರ್ಯಗಳೂ ನಿರಂತರವಾಗಿ ಸಾಗುತ್ತಿದ್ದು, ನನೆಗುದಿಗೆ ಬಿದ್ದಿರುವ ‘ಉಳಗಾ-ಕೆರವಡಿ ಸೇತುವೆ’ ಕಾಮಗಾರಿಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.