
ಬೆಂಗಳೂರು(ಫೆ. 17) ಸಚಿವ ಸ್ಥಾನ ವಂಚಿತ 22 ಜನ ಶಾಸಕರು ರಹಸ್ಯ ಸಭೆ ಸೇರಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಉತ್ತರ ಕರ್ನಾಟಕದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಮೀಟಿಂಗ್ ಮಾಡಿದ್ದಾರೆ.
"
ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಜು ಗೌಡ, ಸಿ ಪಿ ಯೋಗೇಶ್ವರ್, ಅಂಗಾರ ಸಭೆಯಲ್ಲಿ ಭಾಗಿಯಾಗಿದ್ದಾರೆ. ಯಡಿಯೂರಪ್ಪ ಮಾಜಿ ಆಪ್ತ ಸಂತೋಷ ಸೇರಿ 22 ಮಂದಿ ಸಭೆಯಲ್ಲಿ ಇದ್ದರು.
ಮತ್ತೆ ಆಪರೇಶನ್ ಕಮಲ, ಸುಳಿವು ಕೊಟ್ಟ ಕಟೀಲ್
ಸುವರ್ಣ ನ್ಯೂಸ್ ಕ್ಯಾಮೆರಾ ಕಾಣುತ್ತಿದ್ದಂತೆ ಸಭೆ ಅಂತ್ಯಗೊಳಿಸಿದ ಮುಖಂಡರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಸಭೆ ಅಂತ್ಯಗೊಳಿಸಿ ಬೇರೆ ರಹಸ್ಯ ಸ್ಥಳಕ್ಕೆ ದೌಡಾಯಿಸಿದ್ದು ಕೆಲ ಶಾಸಕರು ಶಟ್ಟರ್ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.