ಎಲೆಕ್ಷನ್‌ಗಾಗಿ ಮಾರ್ಗಸೂಚಿಗಳನ್ನ ಪ್ರಕಟಿಸಿದ ಚುನಾವಣೆ ಆಯೋಗ

Published : Sep 26, 2020, 02:33 PM ISTUpdated : Sep 26, 2020, 02:46 PM IST
ಎಲೆಕ್ಷನ್‌ಗಾಗಿ ಮಾರ್ಗಸೂಚಿಗಳನ್ನ ಪ್ರಕಟಿಸಿದ ಚುನಾವಣೆ ಆಯೋಗ

ಸಾರಾಂಶ

ಕೋವಿಡ್19 ಸಾಂಕ್ರಾಮಿಕ ರೋಗದ ನಡುವೆ ಮುಕ್ತ, ನ್ಯಾಯಸಮ್ಮತ ಮತ್ತು ಸುರಕ್ಷಿತ ಚುನಾವಣೆನಡೆಸಲು ಭಾರತ ಚುನಾವಣಾ ಆಯೋಗ (ಇಸಿ) ಮಾರ್ಗಸೂಚಿಗಳನ್ನು ಹೊರಡಿಸಿದೆ.

ನವದೆಹಲಿ, (ಸೆ.26): ಬಿಹಾರ ವಿಧಾನಸಭೆ ಎಲೆಕ್ಷನ್‌ಗೆ ಈಗಾಗಲೇ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದ್ದು,  ಮೂರು ಹಂತಗಳಲ್ಲಿ ನಡೆಯಲಿದೆ. 

ಅಕ್ಟೋಬರ್ 28 ಮತ್ತು ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ.

ಇದೀಗ  ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ COVID-19 ಸಾಂಕ್ರಾಮಿಕ ರೋಗದ ನಡುವೆ ಮುಕ್ತ, ನ್ಯಾಯಸಮ್ಮತ ಮತ್ತು ಸುರಕ್ಷಿತ ಚುನಾವಣೆನಡೆಸಲು ಭಾರತ ಚುನಾವಣಾ ಆಯೋಗ (ಇಸಿ) ಮಾರ್ಗಸೂಚಿಗಳನ್ನು ಹೊರಡಿಸಿದೆ.

3 ಹಂತದಲ್ಲಿ ಬಿಹಾರ ಚುನಾವಣೆ: ನ.10ಕ್ಕೆ ಮತ ಎಣಿಕೆ

ಮತದಾರರ ಪಟ್ಟಿಯಲ್ಲಿನ ಗಂಭೀರ ಲೋಪಗಳನ್ನು ಗುರುತಿಸಲು ವಿಶೇಷ ಪ್ರಯತ್ನಗಳನ್ನು ಮಾಡಲಾಗಿದ್ದು ಮತ್ತು ಅವುಗಳನ್ನು ಪರಿಹರಿಸಲು ಉದ್ದೇಶಿತ SVEEP ಚಟುವಟಿಕೆಗಳನ್ನು ನಡೆಸಲಾಗಿದೆ ಎಂದು ಹೇಳಿದೆ. 

ಮಾರ್ಗಸೂಚಿಗಳು ಇಂತಿವೆ
*  ಚುನಾವಣಾ ಉದ್ದೇಶಕ್ಕಾಗಿ ಬಳಸಲಾಗುವ ಹಾಲ್ /ಕೊಠಡಿಯ ಪ್ರವೇಶ ದ್ವಾರದಲ್ಲಿ ಎಲ್ಲ ವ್ಯಕ್ತಿಗಳ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು, 

* ಎಲ್ಲ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಗಳನ್ನು ಲಭ್ಯಗೊಳಿಸಬೇಕು

*  ಸಾಮಾಜಿಕ ವಿಚಲನ ಮಾನದಂಡಗಳನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ಸಭಾಂಗಣಗಳನ್ನು ಗುರುತಿಸಿ, ಬಳಸಬೇಕು 

* ನಾಮಪತ್ರ ಸಲ್ಲಿಕೆಗೆ ಬರುವ ವರ ಸಂಖ್ಯೆ ಗೆ ಈಗ ಐವರ ಬದಲಾಗಿ ಇಬ್ಬರಿಗೆ , ಮೂರು ಕಾರುಗಳ ಬದಲಿಗೆ ಎರಡು ಕಾರುಗಳಿಗೆ ಮಾತ್ರ ಅವಕಾಶ.

* ನಾಮಪತ್ರ ಸಲ್ಲಿಕೆಗಾಗಿ ಆನ್ ಲೈನ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಮೊದಲ ಬಾರಿಗೆ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಭದ್ರತಾ ಮೊತ್ತವನ್ನು ಠೇವಣಿ ಮಾಡಲು ಸಾಧ್ಯವಾಗಲಿದೆ. 

* ಆಯೋಗವು ಮನೆ ಮನೆಗೆ ಪ್ರಚಾರಕ್ಕೆ ಅಭ್ಯರ್ಥಿ ಸೇರಿದಂತೆ ಅಭ್ಯರ್ಥಿಗಳ ಸಂಖ್ಯೆಯನ್ನು ಐದಕ್ಕೆ ಸೀಮಿತಗೊಳಿಸಿದೆ. 
* ರೋಡ್ ಶೋಗಳಲ್ಲಿ ಬರುವ ವಾಹನಗಳ ಸಂಖ್ಯೆಯನ್ನು 10ರ ಬದಲು 5 ವಾಹನಗಳಿಗೆ ಸೀಮಿತಗೊಳಿಸಬೇಕು. 

* ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಲಾಗಿದೆ ಎಂದು ಅದು ಹೇಳಿದೆ. ಆದರೆ ಗೃಹ ಸಚಿವಾಲಯ ನೀಡುವ ಸೂಚನೆಗಳಿಗೆ ಒಳಪಟ್ಟಿರುತ್ತದೆ. 

* ಚುನಾವಣಾ ಪ್ರಕ್ರಿಯೆಯಲ್ಲಿ ಫೇಸ್ ಮಾಸ್ಕ್, ಹ್ಯಾಂಡ್ ಸಾನಿಟೈಸರ್, ಥರ್ಮಲ್ ಸ್ಕ್ಯಾನರ್, ಗ್ಲೌಸ್, ಫೇಸ್ ಶೀಲ್ಡ್, ಮತ್ತು ಪಿಪಿಇ ಕಿಟ್ ಗಳನ್ನು ಕಡ್ಡಾಯಗೊಳಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!