ನಿತೀಶ್‌, ತೇಜಸ್ವಿ ಮನೆ ಮುಂದೆ ಕಾರ್ಯಕರ್ತರ ಕಣ್ಣಾಮುಚ್ಚಾಲೆ!

Published : Nov 11, 2020, 11:37 AM ISTUpdated : Nov 11, 2020, 11:43 AM IST
ನಿತೀಶ್‌, ತೇಜಸ್ವಿ ಮನೆ ಮುಂದೆ ಕಾರ್ಯಕರ್ತರ ಕಣ್ಣಾಮುಚ್ಚಾಲೆ!

ಸಾರಾಂಶ

ನಿತೀಶ್‌, ತೇಜಸ್ವಿ ಮನೆ ಮುಂದೆ ಕಾರ್ಯಕರ್ತರ ಕಣ್ಣಾಮುಚ್ಚಾಲೆ| ಎನ್‌ಡಿಎ ಮುನ್ನಡೆ ಬೆನ್ನಲ್ಲೇ ನಿತೀಶ್‌ ಮನೆ ಮುಂದೆ ಬೆಂಬಲಿಗರ ಪಡೆ

ಪಟನಾ(ನ.11): ಬಿಹಾರದಲ್ಲಿ ವಿಜಯಲಕ್ಷ್ಮಿ ಕಣ್ಣಾಮುಚ್ಚಾಲೆ ಆಡಿದ್ದರಿಂದ ನಿತೀಶ್‌ ಕುಮಾರ್‌ ಹಾಗೂ ತೇಜಸ್ವಿ ಯಾದವ್‌ ಅವರ ನಿವಾಸದಲ್ಲಿ ಬೆಂಬಲಿಗರ ಮನಸ್ಥಿತಿಯಲ್ಲೂ ಏರಿಳಿತ ಕಂಡುಬಂದಿತ್ತು.

ನಿತೀಶ್‌ ಕುಮಾರ್‌ ಅವರ 1 ಅನ್ನೆ ಮಾರ್ಗ್‌ ನಿವಾಸ ಹಾಗೂ ಸಕ್ರ್ಯುಲರ್‌ ರೋಡ್‌ ನಿವಾಸದ ಮಧ್ಯೆ ಕೇವಲ 200 ಮೀಟರ್‌ ಅಂತರವಿದೆ. ಚುನಾವಣಾಪೂರ್ವ ಸಮೀಕ್ಷೆಗಳು ಆರ್‌ಜೆಡಿ ನೇತೃತ್ವದ ಮಹಾಗಠಬಂಧನ್‌ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದರಿಂದ ಮುಂಜಾನೆಯಿಂದಲೇ ಬೆಂಬಲಿಗರು ಹಾಗೂ ಮಾಧ್ಯಮಗಳು ತೇಜಸ್ವಿ ಯಾದವ್‌ ನಿವಾಸದ ಮುಂದೆ ಜಮಾವಣೆ ಆಗಿದ್ದವು. ಆದರೆ, ಎನ್‌ಡಿಎ ಮೈತ್ರಿಕೂಟ ಮೇಲುಗೈ ಸಾಧಿಸುತ್ತಿದ್ದಂತೆ ಬೆಂಬಲಿಗರು, ಮಾಧ್ಯಮಗಳು ನಿತೀಶ್‌ ಅವರ ನಿವಾಸದ ಮುಂದೆ ಜಮಾವಣೆ ಆಗಲು ಆರಂಭಿಸಿದರು. ಆದರೆ, ನಿತೀಶ್‌ ಕುಮಾರ್‌ ಮಾತ್ರ ತಮ್ಮ ನಿವಾಸದಿಂದ ಹೊರಗೆ ಬಂದಿರಲಿಲ್ಲ. ಎನ್‌ಡಿಎ ಬಹುಮತದತ್ತ ಸಾಗುವ ಸುಳಿವು ಸಿಗುತ್ತಿದ್ದಂತೆ ಪಕ್ಷದ ಮುಖಂಡರು ಒಬ್ಬೊಬ್ಬರಾಗಿ ನಿತೀಶ್‌ ನಿವಾಸಕ್ಕೆ ಆಗಮಿಸಲು ಆರಂಭಿಸಿದರು.

ಅದೇ ರೀತಿ ಎಲ್ಲಾ ಪಕ್ಷಗಳ ಕಚೇರಿಗಳು ಇರುವ ವೀರ್‌ಚಾಂದ್‌ ಪಟೇಲ್‌ ರೋಡ್‌ನಲ್ಲಿಯೂ ಇದೇ ರೀತಿಯ ಬೆಳವಣಿಗೆಗಳು ಕಂಡುಬಂದವು. ಮಂಕಾಗಿದ್ದ ಬಿಜೆಪಿ ಹಾಗೂ ಜೆಡಿಯು ಕಚೇರಿಯಲ್ಲಿ ನಿಧಾನವಾಗಿ ಚಟುವಟಿಕೆಗಳು ಗರಿಗೆದರಿದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ