NDA ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ಮಹಾಘಟ್ ಬಂಧನ್‌ಗೆ ಭಾರೀ ಮುನ್ನಡೆ

Published : Nov 10, 2020, 09:34 AM ISTUpdated : Nov 10, 2020, 10:06 AM IST
NDA ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ಮಹಾಘಟ್ ಬಂಧನ್‌ಗೆ ಭಾರೀ ಮುನ್ನಡೆ

ಸಾರಾಂಶ

ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ರೆ, ಮತ್ತೊಂದೆಡೆ ಜಿದ್ದಾಜಿದ್ದಿಗೆ ಕಾರಣವಾಗಿರುವ ಬಿಹಾರದಲ್ಲೂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶುರುವಾಗಿದೆ.

ಪಾಟ್ನಾ, (ನ.10): ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಮತ ಎಣಿಗೆ ಪ್ರಕಿಯೆ ಮುಂದುವರೆದಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ.

ಲಾಲ್ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಆರಂಭಿಕ ಮುನ್ನಡೆ ಸಾಧಿಸಿದ್ದು, ತೇಜಸ್ವಿ ಯಾದವ್ ರ ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. 

Live Blog: ಬಿಹಾರದಲ್ಲಿ ತೇಜಸ್ವಿ ಆಗ್ತಾರಾ ಸಿಎಂ? ಕರ್ನಾಟಕದಲ್ಲಿ ಗೆಲ್ಲುತ್ತಾ ಬಿಜೆಪಿ? 

ಒಟ್ಟು 243 ಕ್ಷೇತ್ರಗಳ ಪೈಕಿ ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟ್ ಬಂಧನ್ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟ 56 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಮುಸ್ಲಿಂ, ಯಾದವರು ಹೆಚ್ಚಾಗಿರುವ ಪ್ರದೇಶಗಳಾಗಿರುವ ಕೋಸಿ, ಮಿಥಲಾಂಚಲ್ ಪ್ರಾಂತ್ಯಗಳಲ್ಲಿ ಮಹಾಘಟ್ ಬಂಧನ್  ಬಹಳ  ಮುನ್ನಡೆ ಸಾಧಿಸಿಕೊಂಡಿದೆ. 122 ಮ್ಯಾಜಿಕ್ ನಂಬರ್ ಇದ್ದು, ಬಹುತೇಕ ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟ್ ಬಂಧನ್‌ಗೆ ಸಿಗುವ ಸಾಧ್ಯತೆಗಳು ಹೆಚ್ಚಿವೆ.

ಯಾರ ಪಾಲಿಗೆ ಬಿಹಾರ?: ನಿತೀಶ್ ಅಧಿಕಾರ ಉಳಿಯುತ್ತಾ? ತೇಜಸ್ವಿ ಆಸೆ ಈಡೇರುತ್ತಾ?

ಬಿಹಾರದಲ್ಲಿ ಸತತ ಮೂರು ಅವಧಿಗೆ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಅದರಲ್ಲಿ ಹೆಚ್ಚಿನ ಅವಧಿ ಅವರು ಎನ್‌ಡಿಎಯ ಭಾಗವಾಗಿಯೇ ಇದ್ದರು. ಈ ಬಾರಿ ಎನ್‌ಡಿಎಗೆ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಭಾರಿ ಪೈಪೋಟಿ ನೀಡಿದೆ. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನವು ಈಗಾಗಲೇ ಅಂದಾಜಿಸಿವೆ. ಹಾಗಾಗಿ, ಈ ಫಲಿತಾಂಶ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ