
ನವದೆಹಲಿ: ‘ಬಿಹಾರದಲ್ಲಿ ಎನ್ಡಿಎಗೆ ದೊರೆತ ಅಗಾಧ ಜನಾದೇಶವು ಅಭಿವೃದ್ಧಿ, ಮಹಿಳಾ ಸುರಕ್ಷತೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳಿಗೆ ಜನರ ಅನುಮೋದನೆಯ ಮುದ್ರೆಯಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಬಿಹಾರ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಕ್ಸ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ‘ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕಾಗಿ ಪೂರ್ಣ ಹೃದಯದಿಂದ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯವನ್ನು ಜಂಗಲ್ ರಾಜ್ನ ಕತ್ತಲೆಯಿಂದ ಹೊರತರಲು ಯತ್ನಿಸಿದ್ದಾರೆ.
ಬಿಹಾರದ ಜನರ ಪ್ರತಿ ಮತವೂ ಭಾರತದ ಭದ್ರತೆಗೆ ಬೆದರಿಕೆ ಹಾಕುವವರ ವಿರುದ್ಧ ಮೋದಿ ಸರ್ಕಾರದ ನೀತಿಯ ಮೇಲಿನ ನಂಬಿಕೆಯ ಸಂಕೇತವಾಗಿದೆ. ಜ್ಞಾನ, ಕಠಿಣ ಪರಿಶ್ರಮ ಮತ್ತು ಪ್ರಜಾಪ್ರಭುತ್ವದ ರಕ್ಷಕರಾದ ಬಿಹಾರದ ನೆಲದ ಜನರಿಗೆ ಹೃತ್ಪೂರ್ವಕ ನಮನಗಳು’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.