ಸೈಕ್ಲಿಂಗ್​ ಹೋಗಿದ್ದಾಗ ಮಾರ್ಗ ಮಧ್ಯೆಯೇ ಮಾಜಿ ಶಾಸಕರ ಪುತ್ರ ಸಾವು

Published : Sep 13, 2020, 09:02 PM ISTUpdated : Sep 13, 2020, 09:07 PM IST
ಸೈಕ್ಲಿಂಗ್​ ಹೋಗಿದ್ದಾಗ ಮಾರ್ಗ ಮಧ್ಯೆಯೇ  ಮಾಜಿ ಶಾಸಕರ ಪುತ್ರ ಸಾವು

ಸಾರಾಂಶ

ಮಾಜಿ ಶಾಸಕರೋರ್ವರ ಪುತ್ರ ಸೈಕ್ಲಿಂಗ್​ಗೆ ಹೋಗಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟ ಘಟನೆ ನಡೆದಿದೆ.ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. 

ಬಾಗಲಕೋಟೆ, (ಸೆ.13): ಬೀಳಗಿ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್ ಪಾಟೀಲ್ ಪುತ್ರ  ಸೈಕ್ಲಿಂಗ್​ಗೆ ಹೋಗಿದ್ದಾಗ ಮಾರ್ಗ ಮಧ್ಯೆಯೇ ಮೃತಟ್ಟಿದ್ದಾರೆ. 

ಇವರು ಪ್ರತಿದಿನವೂ ಸುಮಾರು 50 ಕಿಮೀ ದೂರ ಸೈಕ್ಲಿಂಗ್​ಗೆ ಹೋಗುತ್ತಿದ್ದರು.  ಹಾಗೇ ಇಂದು (ಭಾನುವಾರ) ಕೂಡ ಸ್ನೇಹಿತರೊಂದಿಗೆ ಬಾಗಲಕೋಟೆಯಿಂದ ಬಾದಾಮಿ ತಾಲೂಕಿನ ಕೆರೂರ ಬಳಿ ಹೋಗಿದ್ದ ವಿನೋದ್ ಅವರಿಗೆ ಅಲ್ಲಿಯೇ ತೀವ್ರ ಹೃದಯಾಘಾತವಾಗಿದೆ.

ಬಿಜೆಪಿ ಮಾಜಿ ಶಾಸಕರ ಪುತ್ರ ಆತ್ಮಹತ್ಯೆಗೆ ಶರಣು

ಕೂಡಲೇ ಅವರನ್ನ ಸೈಕ್ಲಿಂಗ್ ತಂಡದಲ್ಲಿದ್ದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ನಂತರ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ವಿನೋದ ಅವರು ಮೃತಪಟ್ಟಿದ್ದಾರೆ.

ವಿನೋದ್​ ಅವರು ಎರಡು ದಿನಗಳ ಹಿಂದಷ್ಟೇ 70.ಕಿ.ಮೀ. ದೂರ ಸೈಕ್ಲಿಂಗ್ ಮಾಡಿದ್ದರು. ಹಾಗೇ ಮುಂದೆ 100 ಕಿ.ಮೀ. ಸೈಕ್ಲಿಂಗ್ ಮಾಡುವ ಗುರಿಯನ್ನೂ ಹೊಂದಿದ್ದರು. ಅಲ್ಲದೇ ಅವರು ಬಾಗಲಕೋಟೆ ಸೈಕ್ಲಿಂಗ್ ಕ್ಲಬ್ ಸದಸ್ಯ, ಅಮೆಚೂರ್ ಸೈಕ್ಲಿಸ್ಟ್ ಕೂಡ ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ