
ಬೆಂಗಳೂರು, (ಅ.13): ಕರ್ನಾಟಕದಲ್ಲಿ ಎದುರಾಗಿರುವ ಆರ್.ಆರ್.ನಗರ ಮತ್ತು ಶಿರಾ ಬೈ ಎಲೆಕ್ಷನ್ಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.
ಬಿಜೆಪಿ ಹೈಕಮಾಂಡ್ ಇಂದು (ಮಂಗಳವಾರ) ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ವಲಸೆ ಬಂದ ನಾಯಕರುಗಳಿಗೆ ಬಿಜೆಪಿ ಮಣೆ ಹಾಕಿದೆ.
ಒಂದೇ ದಿನ ಮುನಿರತ್ನಗೆ ಡಬಲ್ ಧಮಾಕಾ..!
ನಿರೀಕ್ಷೆಯಂತೆ ಬೆಂಗಳೂರಿನ ಆರ್.ಆರ್. ನಗರ ಉಪಚುನಾವಣೆ ಟಿಕೆಟ್ ಅನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮುನಿರತ್ನ ಅವರಿಗೆ ಕೊಡಲಾಗಿದೆ. ಇನ್ನು ಶಿರಾ ಕ್ಷೇತ್ರದ ಟಿಕೆಟ್ ಡಾ. ರಾಜೇಶ್ ಗೌಡ ಅವರಿಗೆ ನೀಡಲಾಗಿದೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.