
ಬೆಂಗಳೂರು, (ಅ.20): ಆರ್.ಆರ್.ನಗರ ಉಪಚುನಾವಣೆ ಗೆ ಲ್ಲಲು ಬಿಜೆಪಿ ವಾರ್ಡ್ ಮಟ್ಟದ ಉಸ್ತುವಾರಿಗಳ ನೇಮಕ ಮಾಡಿದೆ.
ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯ ಸಂಪೂರ್ಣ ಉಸ್ತುವಾರಿಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ್ ಲಿಂಬಾವಳಿ ಹಾಗೂ ಸಚಿವ ಆರ್.ಅಶೋಕ್ ಅವರಿಗೆ ವಹಿಸಲಾಗಿದೆ.
RR ನಗರ ಬೈ ಎಲೆಕ್ಷನ್: ಅಭ್ಯರ್ಥಿವಿರುದ್ಧ ಅಕ್ರಮ ವೋಟರ್ ಕಾರ್ಡ್ ಆರೋಪ
ಇನ್ನು ಇಂದು (ಮಂಗಳವಾರ) ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ 9 ವಾರ್ಡ್ಗಳಿಗೂ ಸಚಿವ ಹಾಗೂ ಶಾಸಕರುಗಳನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.
ಯಾವ ವಾರ್ಡ್ಗೆ ಯಾರು ಉಸ್ತುವಾರಿ?
* ಕೊಟ್ಟಿಗೆಪಾಳ್ಯ- ಸಚಿವ ವಿ.ಸೋಮಣ್ಣ
* ಲಗ್ಗೆರೆ- ಸಚಿವರಾದ ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ. ಭೈರತಿ ಬಸವರಾಜು
* ಜ್ಞಾನಭಾರತಿ ವಾರ್ಡ್- ಸಚಿವ ಎಸ್.ಟಿ ಸೋಮಶೇಖರ್
* ರಾಜರಾಜೇಶ್ವರಿ ನಗರ ವಾರ್ಡ್- ಶಾಸಕ ರವಿ ಸುಬ್ರಹ್ನಣ್ಯ ಹಾಗೂ ಸಂಸದ ತೇಜಸ್ವಿ ಸೂರ್ಯ
* HMT ವಾರ್ಡ್-ಮಾಜಿ ಶಾಸಕ ಮುನಿರಾಜು
* ಜಾಲಹಳ್ಳಿ ವಾರ್ಡ್- ಎಸ್.ಆರ್.ವಿಶ್ವನಾಥ್
* ಜೆ.ಪಿ.ಪಾರ್ಕ್- ನಂದೀಶ್ ರೆಡ್ಡಿ
* ಯಶವಂತಪುರ- ಸತೀಶ್ ರೆಡ್ಡಿ
* ಲಕ್ಷ್ಮೀದೇವಿ ನಗರ- ಪೆಂಡಿಂಗ್
ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ದಿ.ಡಿಕೆ ರವಿ ಅವರ ಪತ್ನ ಕುಸುಮಾ ಹಾಗೂ ಜೆಡಿಎಸ್ನಿಂದ ಕೃಷ್ಣಮೂರ್ತಿ ಅವರು ಆರ್.ಆರ್. ನಗರ ಬೈ ಎಲೆಕ್ಷನ್ಗೆ ಅಖಾಡದಲ್ಲಿದ್ದಾರೆ.
ಇನ್ನು ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.