ಆಡಿಯೋ ಬಾಂಬ್ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್

Published : Feb 16, 2019, 05:10 PM ISTUpdated : Feb 16, 2019, 05:23 PM IST
ಆಡಿಯೋ ಬಾಂಬ್ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಆಪರೇಷನ್ ಆಡಿಯೋ ಕೇಸ್ ನಲ್ಲಿ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು, [ಫೆ.16]: ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿದ್ದ ಆಪರೇಷನ್ ಆಡಿಯೋ ಕೇಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ  ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ಬಿ.ಎಸ್.ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂಗೌಡ,  ಮರಮ್ಕಲ್  ವಿರುದ್ಧ  ಮೊಕದ್ದಮೆ  ದಾಖಲಿಸಿದ್ದರು.

HDK ನಿಲುವು ಸಡಿಲು, ಸಿದ್ದರಾಮಯ್ಯ ಬಿಗಿಪಟ್ಟಿನಿಂದಾಗಿ ಆಡಿಯೋ ಕೇಸ್‌ SITಗೆ

ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು [ಶನಿವಾರ] ಇವರೆಲ್ಲರಿಗೂ ಷರತ್ತುಬದ್ಧ  ಜಾಮೀನು ನೀಡಿದೆ. ಸಾಕ್ಷ್ಯ ನಾಶ ಮಾಡಬಾರದು. 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಅನುಮತಿ ಇಲ್ಲದೇ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆಯೂ ಷರತ್ತು ವಿಧಿಸಲಾಗಿದ್ದು,  ಪೊಲೀಸ್ ಅಧಿಕಾರಿಗಳ ತನಿಖೆಗೆ ಸಹಕರಿಸುವಂತೆ ಕೋರ್ಟ್ ಸೂಚಿಸಿದೆ.

ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರಿಗೆ ಬಿಜೆಪಿಗೆ ಬರುವುಂತೆ ಆಮಿಷ ನೀಡಲಾಗಿತ್ತು ಎನ್ನುವ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಅವರು ಬಹಿರಂಗ ಪಡಿಸಿದ್ದರು.

ಅಷ್ಟೇ ಅಲ್ಲದೇ ಈ ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು 50 ಕೋಟಿ ರೂ.ಗೆ ಬುಕ್ ಮಾಡಿದ್ದೇವೆ ಎನ್ನುವ ಅಂಶವಿತ್ತು. ಇದ್ರಿಂದ ಬಜೆಟ್ ಅಧಿವೇಶನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. 

 ಈ ಪ್ರಕರಣದ ತನಿಖೆಯನ್ನು SITಗೆ ನೀಡಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಸಿಎಂ ಕುಮಾರಸ್ವಾಮಿಗೆ ಸೂಚಿಸಿದ್ದಾರೆ. ಆದ್ರೆ ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್