ಮಸ್ಕಿ ಉಪಕದನ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡರಿಂದ ನಾಮಪತ್ರ ಸಲ್ಲಿಕೆ

Suvarna News   | Asianet News
Published : Mar 24, 2021, 02:06 PM IST
ಮಸ್ಕಿ ಉಪಕದನ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡರಿಂದ ನಾಮಪತ್ರ ಸಲ್ಲಿಕೆ

ಸಾರಾಂಶ

ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಗೌಡ ಪಾಟೀಲ್| ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ| ಅಂಕಲಿಮಠ,‌ ಮಸ್ಕಿಯ ಗಚ್ಚಿನಮಠದಲ್ಲಿ ದರ್ಶನ ಪಡೆದ ಪ್ರತಾಪಗೌಡ| 

ರಾಯಚೂರು(ಮಾ.24): ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು(ಬುಧವಾರ) ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. 

ನಾಮಪತ್ರ ಸಲ್ಲಿಸುದಕ್ಕೂ ಮೊದಲು ಪ್ರತಾಪ್ ಗೌಡ ಪಾಟೀಲ್ ಅವರು ಅಂಕಲಿಮಠ,‌ ಮಸ್ಕಿಯ ಗಚ್ಚಿನಮಠದಲ್ಲಿ ದರ್ಶನವನ್ನ ಪಡಿದಿದ್ದಾರೆ ಪ್ರತಾಪ್ ಗೌಡ ಪಾಟೀಲ್ ಮಸ್ಕಿ ಬಿಜೆಪಿ ಕಚೇರಿ ಆಗಮಿಸಿ ಮುಖಂಡರೊಂದಿಗೆ ಪಟ್ಟಣದ ತಾಪಂ ಕಾರ್ಯಾಲಯದಲ್ಲಿ ಪ್ರಾರಂಭಿಸಿರುವ ಆರ್.ಓ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಹಾಗೂ ಲಿಂಗಸುಗೂರಿನ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮಸ್ಕಿ ಉಪಚುನಾವಣೆ ಕದನ: ಆರಂಭದಲ್ಲಿ ಬಿಜೆಪಿಗೆ ಬಿಗ್ ಶಾಕ್!

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೇ. 29 ರಂದು‌ ಕಾರ್ಯಕರ್ತರೊಂದಿಗೆ ಆಗಮಿಸಿ ಮತ್ತೊಂದು ‌ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಮಾ. 23 ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮಾ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ.3 ನಾಮಪತ್ರ ವಾಪಸ್ ಕೊನೆಯ ದಿನವಾಗಿದ್ದು, ಏ.17 ಮತದಾನ ನಡೆಯಲಿದೆ. ಮೇ.2ಕ್ಕೆ ಫಲಿತಾಂಶ ಹೊರಬೀಳಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?