
ಬೆಂಗಳೂರು(ಜುಲೈ 22): ಕೊರೋನಾ ವೈರಸ್ ಭೀತಿ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದ್ದು, ವಿಧಾನಪರಿಷತ್ ನಾಮನಿರ್ದೇಶನದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ರಾಜಕೀಯ ಬಿರುಸುಗೊಂಡಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟದಿಂದ ಅಚ್ಚರಿಯ ಆಯ್ಕೆ ಮಾಡಿದ್ದ ಬಿಜೆಪಿ ಹೈಕಮಾಂಡ್ ಈಗ ವಿಧಾನಪರಿಷತ್ಗೆ ನಾಮನಿರ್ದೇಶನದ ವಿಚಾರದಲ್ಲೂ ಅಚ್ಚರಿಯ ಆಯ್ಕೆ ಮಾಡಿದೆ. 5 ವಿಧಾನಪರಿಷತ್ ನಾಮನಿರ್ದೇಶನದ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಿದ್ದು, ಇನ್ನೇನು ಅಧಿಕೃತ ಘೊಷಣೆಯೊಂದೇ ಬಾಕಿ ಇದೆ.
"
ಕೊರೋನಾ ಗೆದ್ದ ಸುಮಲತಾ ಅಂಬರೀಶ್: ಐಟಿ ಕಂಪನಿಗಳಿಗೆ ಗುಡ್ ನ್ಯೂಸ್: ಜುಲೈ 22ರ ಟಾಪ್ 10 ಸುದ್ದಿ
ರಾಜ್ಯದ ವಿಧಾನಪರಿಷತ್ನಲ್ಲಿ ಒಟ್ಟು 11 ಸ್ಥಾನಗಳನ್ನ ರಾಜ್ಯಪಾಲರೇ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಅದರಲ್ಲಿ ಈಗ ಐದು ಸ್ಥಾನಗಳು ಖಾಲಿ ಇದ್ದು, ಈ ಐದು ಸ್ಥಾನಗಳನ್ನ ಭರ್ತಿ ಮಾಡಲು ಬಿಜೆಪಿ ಮುಂದಾಗಿದೆ.
ಇದಕ್ಕೆ ಪೂರಕವೆಂಬಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಬುಧವಾರ) ರಾಜ್ಯಪಾಲ ವಾಜುಬಾಯಿ ವಾಲಾ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಅಲ್ಲದೇ ಈ ವೇಳೆ ಯಡಿಯೂರಪ್ಪ ಅವರು ನಾಮನಿರ್ದೇಶನ ಸದಸ್ಯರ ಪಟ್ಟಿಯನ್ನು ರಾಜ್ಯಪಾಲ ವಾಜುಬಾಯಿ ವಾಲಾ ಅವರಿಗೆ ಕೊಟ್ಟುಬಂದಿದ್ದಾರೆ ಎಂದು ಮಾಹಿತಿ ತಿಳಿಬಂದಿದ್ದು, ಶೀಘ್ರದಲ್ಲೇ ರಾಜಭವನದಿಂದ ಅಧಿಕೃತವಾಗಿ ನಾಮನಿರ್ದೇಶನ ಸದಸ್ಯರುಗಳ ಹೆಸರು ಘೋಷಣೆಯಾಗಲಿದೆ.
ನಟಿ ಮಾಳವಿಕ ಅವಿನಾಶ್, ಮತ್ತು ಶಿಕ್ಷಣ ಕ್ಷೇತ್ರದಿಂದ ಗುರುರಾಜ್ ಕರ್ಜಗಿ ಅವರ ಹೆಸರು ಸಹ ಕೇಳಿಬಂದಿದ್ದವು. ಆದ್ರೆ, ಕೊನೆಗಳಿಗೆಯಲ್ಲಿ ಶಾಂತಾರಾಂ ಸಿದ್ದಿ, ಸಿಪಿ ಯೋಗೇಶ್ವರ್, ಎಚ್ ವಿಶ್ವನಾಥ್ , ಸಾಬಣ್ಣ ತಳವಾರ್ ಮತ್ತು ಭಾರತಿ ಶೆಟ್ಟಿ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದ್ದು, ಹೈಕಮಾಂಡ್ ಅನುಮತಿಗೆ ನೀಡಿದೆ. ಈ ಹಿನ್ನೆಯಲ್ಲಿ ಖುದ್ದು ಸಿಎಂ ರಾಜಪಾಲರಿಗೆ ಬಳಿ ಹೋಗಿ ಅಭ್ಯರ್ಥಿಗಳ ಪಟ್ಟಿ ನೀಡಿದ್ದಾರೆ.
* ಶಾಂತಾರಾಂ ಸಿದ್ದಿ - ವನವಾಸಿ ಕಲ್ಯಾಣ ಸೇವಾ ವಲಯದಲ್ಲಿ ಕೆಲಸ ಮಾಡ್ತಿರುವ ಮುಖಂಡ. - ( ವಿಶಿಷ್ಟ ಸೇವಾ ಕ್ಷೇತ್ರ)
* ಎಚ್.ವಿಶ್ವನಾಥ್ - ಸಾಹಿತ್ಯ ಕ್ಷೇತ್ರ.
* ಸಿ ಪಿ ಯೋಗೇಶ್ವರ್ - ಸಿನಿಮಾ ಕ್ಷೇತ್ರ.
* ಸಾಬಣ್ಣ ತಳವಾರ್- ಶಿಕ್ಷಣ ಕ್ಷೇತ್ರ
* ಭಾರತಿ ಶೆಟ್ಟಿ - ಸಮಾಜಸೇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.