ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು, ಜನಾದೇಶಕ್ಕೆ ತಲೆ ಬಾಗುತ್ತೇನೆ: ಸಿ.ಟಿ.ರವಿ

Published : May 14, 2023, 12:56 PM IST
ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು, ಜನಾದೇಶಕ್ಕೆ ತಲೆ ಬಾಗುತ್ತೇನೆ: ಸಿ.ಟಿ.ರವಿ

ಸಾರಾಂಶ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಮೇ.14): ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬಂದ ಬಳಿಕ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ. 

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಿ.ಟಿ.ರವಿ ರಾಜಕೀಯ ಜೀವನ ಈ ಎಲೆಕ್ಷನ್‌ನಲ್ಲಿ ಅಂತ್ಯ: ಸಿದ್ದರಾಮಯ್ಯ

ಸೋಲು-ಗೆಲುವು ಸ್ವಾಭಾವಿಕ: ಜಿಲ್ಲೆಯ ಜನತೆ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು-ಗೆಲುವು ಸ್ವಾಭಾವಿಕ. ಗೆಲುವಿನಿಂದ ಬೀಗಿಲ್ಲ. ಸೋಲಿನಿಂದ ಕುಗ್ಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು. ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದು, ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ತಾವು ತಂದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾರ್ಯಕರ್ತರು ಧೃತಿಗೆಡುವುದು ಬೇಡ. ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!