
ನವದೆಹಲಿ( ಜ. 20) ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸಲು ಕಾಂಗ್ರೆಸ್ ನೆಪ ಹುಡುಕುತ್ತಿದೆ. ಅವರ ಪ್ರಣಾಳಿಕೆಯಲ್ಲಿನ ಅಂಶವನ್ನು ಕಾಂಗ್ರೆಸಿಗರೇ ವಿರೋಧಿಸುತ್ತಾರೆ. ಕಾಂಗ್ರೆಸ್ ಭೌದ್ಧಿಕವಾಗಿ ಎಷ್ಟು ದಿವಾಳಿಯಾಗಿದೆ ಅಂತಾ ಇದರಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
2019 ಪ್ರಣಾಳಿಕೆಯಲ್ಲಿ ಇರುವುದೇನು, ಕಾಂಗ್ರೆಸ್ ಮಾಡುತ್ತಿರುವುದೇನು.? ರೈತರಿಗೆ ಶಕ್ತಿ ತುಂಬಲು ಕಾಂಗ್ರೆಸ್ ಗೆ ಯೋಗ್ಯತೆ ಇರಲಿಲ್ಲ. ರೈತರು ಬೆಳದ ವಸ್ತುಗಳನ್ನು ಎಲ್ಲಿ ಬೇಕಾದ್ರೂ ಮಾರಾಟ ಮಾಡಬಹುದು. ರೈತರಿಗೆ ಕೊಟ್ಟ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ದಲ್ಲಾಳಿಗಳಿಗೆ ಅಧಿಕಾರ ಕೊಡಬೇಕು
ಅನ್ಮೋದು ಕಾಂಗ್ರೆಸ್ ಧೋರಣೆ ಎಂದು ಟೀಕಾ ಪ್ರಹಾರ ಮಾಡಿದರು.
ಮಗನಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡರಾ ಸುಮಲತಾ?
ದಲ್ಲಾಳಿಗಳ ಜೊತೆಗೆ ಕಾಂಗ್ರೆಸ್ ಆಡಳಿತ ನಡೆಸಿದೆ. ದಲ್ಲಾಳಿಗಳಿಂದ ಮುಕ್ತ ಮಾಡುವುದೇ ಮೋದಿಯವರ ಗುರಿ. ದೇಶದ ರೈತರು ಬಿಜೆಪಿ ಜೊತೆ ಇದ್ದಾರೆ. ನೂತನ ಕಾಯ್ದೆ ಬಂದ ಬಳಿಕ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆದಿದೆ. ಬಿಜೆಪಿಯನ್ನು ದೇಶದ ಜನ ಬೆಂಬಲಿಸಿದ್ದಾರೆ ಎಂದು ಕೃಷಿ ಕಾಯಿದೆ ವಿರೋಧ ಮಾಡುತ್ತಿರುವ ಕಾಂಗ್ರೆಸ್ ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.