
ನವದೆಹಲಿ (ಆ. 26): ಕಳೆದ ವರ್ಷ ಐಪಿಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಒಂದು ವರ್ಷ ಕಾಲ ತಮಿಳುನಾಡಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡುತ್ತಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಇದೀಗ ತಮ್ಮ ತಾಯ್ನೆಲದ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಕುಟುಂಬ ರಾಜಕಾರಣದಲ್ಲೇ ಮುಳುಗೇಳುತ್ತಿರುವ ತಮಿಳುನಾಡು ರಾಜಕೀಯಕ್ಕೆ ಹೊಸ ರೂಪ ಕೊಡುವ ಉಮೇದಿನಲ್ಲಿದ್ದಾರೆ. ಭವಿಷ್ಯದ ರಾಜಕೀಯ ಹಾದಿ, ತಮಿಳುನಾಡು ರಾಜಕೀಯ ಸೇರಿ ವಿವಿಧ ವಿಚಾರಗಳನ್ನು ಈ ಸಂದರ್ಭದಲ್ಲಿ ಅವರು ‘ಕನ್ನಡಪ್ರಭ’ ದೊಂದಿಗೆ ಹಂಚಿಕೊಂಡಿದ್ದಾರೆ. ಅದರ ಪೂರ್ಣಪಾಠ ಇಲ್ಲಿದೆ.
ಅಣ್ಣಾಮಲೈ ಅವರ ದಿಢೀರ್ ರಾಜಕೀಯ ಪ್ರವೇಶ ಯಾಕೆ?
ಇದು ದಿಢೀರ್ ಅಲ್ಲ. ಸಾಮಾಜಿಕ ಬದಲಾವಣೆ ಎಷ್ಟುಮುಖ್ಯವೋ, ರಾಜಕೀಯ ಬದಲಾವಣೆಯೂ ಅಷ್ಟೇ ಮುಖ್ಯ. ಪಾರದರ್ಶಕವಾಗಿ ಹೇಳಬೇಕು ಅಂದರೆ ನನ್ನ ಮನಸ್ಥಿತಿಗೆ ಯಾವುದೇ ಬೇರೆ ಪಾರ್ಟಿ ಹೊಂದಾಣಿಕೆ ಆಗಲ್ಲ. ಹಾಗಾಗಿ ಬಿಜೆಪಿ ಸೇರಿದೆ.
ಆಗ ಆಡಳಿತಶಾಹಿ, ಈಗ ರಾಜಕೀಯಶಾಹಿ. ಈ ಫೇಸ್ ಚೇಂಜಿಂಗ್ ಕಷ್ಟಆಗುವುದಿಲ್ಲವೇ?
ನಾನು ಫೇಸ್ಚೇಂಜ್ ಅಂಥ ಹೇಳಲ್ಲ. ರಾಜಕೀಯದಲ್ಲಿ ಅಣ್ಣಾಮಲೈನನ್ನು ನೋಡಿ. ಆ ಮೇಲೆ ನೀವು ಈ ಪ್ರಶ್ನೆ ಕೇಳಿ. ಏನ್ ಸರ್ ನೀವು ಆಗ ಈ ಮಾತು ಹೇಳಿದ್ರೀ ಈಗ ಬೇರೆ ಹೇಳ್ತಾ ಇದ್ದೀರಾ ಅಂಥ. ನಾನು ಯಾವಾಗಲೂ ಅದೇ ಅಣ್ಣಾಮಲೈ ಆಗಿ ಇರ್ತೀನಿ. ನಾನು ಬದಲಾಗಲ್ಲ.
ಕರ್ನಾಟಕದಲ್ಲಿ ಯಾಕೆ ಚುನಾವಣೆ ನಿಲ್ತಿಲ್ಲ ಅಣ್ಣಾಮಲೈ?
ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳ ಅಬ್ಬರ ಇದೆ. ನೀವು ರಾಷ್ಟ್ರೀಯ ಪಕ್ಷ ಆಯ್ಕೆ ಮಾಡಿಕೊಂಡಿದ್ದೀರಾ? ಹೇಗೆ ಇದು?
ನಾನು ಕರ್ನಾಟಕ, ತಮಿಳುನಾಡಿನಲ್ಲಿ ಕೆಲಸ ಮಾಡಿದ ಮನುಷ್ಯ. ನನಗೆ ಯಾವಾಗಲೂ ದೇಶ ಮೊದಲು. ತಮಿಳುನಾಡಿನ ರಾಜಕಾರಣಕ್ಕೂ ಈಗ ಹೊಸ ಆಯಾಮ ಬೇಕಿದೆ. ಇದನ್ನು ಬಿಜೆಪಿ ತಮಿಳುನಾಡಿನಲ್ಲಿ ಕೊಡಲಿದೆ. ರಾಷ್ಟ್ರೀಯ ಪಕ್ಷದಲ್ಲಿ ಕೆಲಸ ಮಾಡಲು ಹೆಚ್ಚಿನ ಅವಕಾಶಗಳಿರುತ್ತವೆæ. ಹಲವು ವರ್ಷ ಕೆಲಸ ಮಾಡಬಹುದು. ಕರ್ನಾಟಕದಲ್ಲೂ ನಾವು ಕೆಲಸ ಮಾಡಬಹುದು.
ತಮಿಳುನಾಡಿನಲ್ಲಿ ನಿಮ್ಮಿಂದ ಬಿಜೆಪಿ ಏನನ್ನು ನಿರೀಕ್ಷೆ ಮಾಡುತ್ತಿದೆ? ಬಿಜೆಪಿಯಿಂದ ನೀವು ಏನು ನಿರೀಕ್ಷೆ ಮಾಡುತ್ತಿದ್ದೀರಿ?
ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ಬಿಜೆಪಿಯನ್ನು ಸ್ವೀಕರಿಸಲು ಜನ ಸಿದ್ಧರಾಗಿದ್ದಾರೆ. ಈಗಿನ ಯುವಪೀಳಿಗೆಗೆ ರಾಜಕಾರಣದಲ್ಲಿ ಸಬಲೀಕರಣ ಬೇಕಾಗಿದೆ. ಇವರು ಈಗ ಜಾತಿ, ಕುಟುಂಬ ನೋಡ್ತಾ ಇಲ್ಲ. ಅಸ್ಸಾಂ, ತ್ರಿಪುರ, ಪಶ್ಚಿಮ ಬಂಗಾಳದಲ್ಲಿ ಇದು ಸಾಬೀತಾಗಿದೆ.
ನನ್ನ ನಿರೀಕ್ಷೆ ತಮಿಳುನಾಡು ಜನರಿಗೆ ಒಳ್ಳೆ ಪಕ್ಷ ಕೊಡಬೇಕು ಎಂಬುದು. ಆ ಪಕ್ಷ ರಾಷ್ಟ್ರೀಯ ಹಿತಾಸಕ್ತಿ ಹೊಂದಿರಬೇಕು. ಅದೇ ವೇಳೆ ತಮಿಳು ಸಂಸ್ಕೃತಿಯನ್ನೂ ಉಳಿಸಬೇಕು. ಜೊತೆಗೆ ತಮಿಳುನಾಡು ದೆಹಲಿ ಮಟ್ಟದಲ್ಲಿ ಸರಿಯಾಗಿ ಪ್ರತಿನಿಧಿಸಿಲ್ಲ. ಕೇಂದ್ರದಿಂದ ಕೆಲ ಸವಲತ್ತು ಸರಿಯಾಗಿ ಸಿಗ್ತಾ ಇಲ್ಲ ಅನಿಸುತ್ತಿದೆ. ಇದೆಲ್ಲ ಬದಲಾಗಬೇಕಿದೆ. ಇದಕ್ಕಾಗಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ.
ನಿಮ್ಮ ನಿವೃತ್ತಿಯ ಹಿಂದೆ ಬಿಜೆಪಿ, ಆರೆಸ್ಸೆಸ್ ಇದೆ ಅನ್ನುವ ಮಾತುಗಳು ಆಗಲೇ ಕೇಳಿ ಬಂದಿದ್ವು? ಈಗ ಅದು ನಿಜವಾಯ್ತಲ್ಲ?
ಇಲ್ಲ. ನನಗೆ ಎಷ್ಟೋ ಮಂದಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ಕರ್ನಾಟಕದಲ್ಲಿ ನಾನು ಹೆಚ್ಚಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಕೊನೆಯ ಪೋಸ್ಟಿಂಗ್ ಕುಮಾರಸ್ವಾಮಿ ಅವರು ಕೊಟ್ಟಿದ್ದು. ಬಿಜೆಪಿಯಲ್ಲಿ ನಾನು ಕೆಲಸ ಮಾಡಿದ್ದು ಬರೀ ಮೂರು ದಿನ ಮಾತ್ರ. ನಾನು ಪೊಲೀಸ್ ವೃತ್ತಿಯಲ್ಲಿದ್ದಾಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಹಲವರನ್ನು ಜೈಲಿಗೆ ಕಳುಹಿಸಿದ್ದೇನೆ. ಅದು ನಮ್ಮ ಯೂನಿಫಾರಂ ಧರ್ಮ. ಅದು ಬೇರೆ, ಈ ರಾಜಕೀಯ ಬೇರೆ.
IPS ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವ ಹಿಂದೆ ಕರ್ನಾಟಕದ ಲೀಡರ್: ಯಾರದು?
ಆಗ ಪೊಲೀಸ್ ಅಧಿಕಾರಿ, ಈಗ ರಾಜಕಾರಣಿ. ಈ ಸಿದ್ಧಾಂತಗಳು ನಿಮಗೆ ಹೊಂದಾಣಿಕೆ ಆಗುತ್ತವಾ?
ನೂರಕ್ಕೆ ನೂರರಷ್ಟುಆಗುತ್ತೆ. ಭಾರತದಲ್ಲಿ ರಾಜಕಾರಣಿ ಈ ಥರ, ಅಧಿಕಾರಿ ಆ ಥರ ಅನ್ನುವ ಭಾವನೆ ಇದೆ. ಇದನ್ನು ನಾವು ಸುಳ್ಳು ಮಾಡೋಣ.
ಅಣ್ಣಾಮಲೈ ಹೊಸತನ ಹುಡುಕುವುದರಲ್ಲಿ ಮುಂದು. ತಮಿಳುನಾಡು ರಾಜಕೀಯದಲ್ಲಿ ಏನು ಹೊಸತನ ಹುಡುಕುತ್ತಿರಿ ಅಥವಾ ವಿಭಿನ್ನವಾಗಿ ಮಾಡ್ತೀರಿ?
ವಿಭಿನ್ನ ಅಂಥ ಏನೂ ಇಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಸರಿಯಾಗಿ ಬಿಂಬಿಸಲ್ಪಡುತ್ತಿಲ್ಲ. ನಮ್ಮ ಪಕ್ಷದ ನಾಯಕರು ಈ ನಿಟ್ಟಿನಲ್ಲಿ ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಿಜವಾದ ತಮಿಳು ಪಾರ್ಟಿ. ಕೇವಲ ಹಿಂದಿ ಹೇರಿಕೆ ವಿಚಾರ ಮುಂದಿಟ್ಟು ಬಿಜೆಪಿ ಮೇಲೆ ದಾಳಿ ಮಾಡಲಾಗುತ್ತಿದೆ. ಆ ರೀತಿ ಇಲ್ಲ. ನನ್ನ ನಂಬಿಕೆ ಏನು ಅಂದ್ರೆ ಎಲ್ಲರೂ ಹಿಂದಿ ಕಲಿಯಬೇಕು. ತಮಿಳುನಾಡಿನಲ್ಲಿ ಇದನ್ನು ತಿರುಚಿ ಹಿಂದಿ ಹೇರಿಕೆ ಅಂಥ ಹೇಳಲಾಗುತ್ತಿದೆ. ಇದು ಬಿಟ್ಟು ತಮಿಳುನಾಡಿನಲ್ಲಿ ಬಿಜೆಪಿ ಮೇಲೆ ಬೇರೆ ಯಾವ ವಿಮರ್ಶೆಯೂ ಇಲ್ಲ.
ಅಣ್ಣಾಮಲೈ ಬಿಜೆಪಿಗೆ ಸೇರಿದ್ಯಾಕೆ? ಅವರ ಬಾಯಿಂದಲೇ ಕೇಳಿ
ಒಂದು ವರ್ಷ ಏನು ಮಾಡಿದರು ಅಣ್ಣಾಮಲೈ?
ಹೆಚ್ಚೂ ಕಮ್ಮಿ ಒಂದೂವರೆ ವರ್ಷ ‘ವಿ ದ ಲೀಡರ್ಸ್ ಫೌಂಡೇಶನ್’ ಅಂಥ ಕಟ್ಟಿಕೊಂಡು ಸುಮಾರು ಏಳೂವರೆ ಸಾವಿರ ಯುವಕರಿಗೆ ನಾಯಕತ್ವ ತರಬೇತಿ ನೀಡಲಾಗಿದೆ. ರಾಜಕೀಯಕ್ಕೆ ಬಂದ ಮೇಲೆ ಅದರಿಂದಲೂ ಹೊರಗಡೆ ಬರುತ್ತೇನೆ. ಯಾಕೆ ಅಂದ್ರೆ ವಿಚಾರಗಳಲ್ಲಿ ಸಂಘರ್ಷ ಬರಬಾರದು ಎಂಬುದು ನನ್ನ ಉದ್ದೇಶ.
ಸಂದರ್ಶನ: ಡೆಲ್ಲಿ ಮಂಜು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.