ಚೊಂಬು ಜಾಹೀರಾತಿಂದ ಬಿಜೆಪಿಗೆ ಎಚ್ಚರ ಆಗಿದೆ: ಡಿ.ಕೆ.ಶಿವಕುಮಾರ್‌

Published : Apr 23, 2024, 07:43 AM IST
ಚೊಂಬು ಜಾಹೀರಾತಿಂದ ಬಿಜೆಪಿಗೆ ಎಚ್ಚರ ಆಗಿದೆ: ಡಿ.ಕೆ.ಶಿವಕುಮಾರ್‌

ಸಾರಾಂಶ

ಖಾಲಿ ಚೊಂಬು ಜಾಹಿರಾತಿನಿಂದ ಪ್ರತಿಪಕ್ಷಗಳ ನಾಯಕರು ಎಚ್ಚರಗೊಂಡಿದ್ದಾರೆ. ಬಿಜೆಪಿಯವರು ಪ್ರತಿಯಾಗಿ ಜಾಹಿರಾತು ನೀಡಿದ್ದರೂ ನಮ್ಮ ಜನರಿಗೆ ಯಾವುದು ಸತ್ಯ, ಯಾವುದು ಸುಳ್ಳು ಎಂದು ಯೋಚನೆ ಮಾಡುವ ಶಕ್ತಿ ಹಾಗೂ ಪ್ರಜ್ಞೆ ಎರಡೂ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.   

ಬೆಂಗಳೂರು (ಏ.23): ಖಾಲಿ ಚೊಂಬು ಜಾಹಿರಾತಿನಿಂದ ಪ್ರತಿಪಕ್ಷಗಳ ನಾಯಕರು ಎಚ್ಚರಗೊಂಡಿದ್ದಾರೆ. ಬಿಜೆಪಿಯವರು ಪ್ರತಿಯಾಗಿ ಜಾಹಿರಾತು ನೀಡಿದ್ದರೂ ನಮ್ಮ ಜನರಿಗೆ ಯಾವುದು ಸತ್ಯ, ಯಾವುದು ಸುಳ್ಳು ಎಂದು ಯೋಚನೆ ಮಾಡುವ ಶಕ್ತಿ ಹಾಗೂ ಪ್ರಜ್ಞೆ ಎರಡೂ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಜಾಹಿರಾತು ನೀಡಿದೆ. ಕರ್ನಾಟಕದ ಜನರಿಗೆ ಬಿಜೆಪಿ ಬಹಳ ಅನ್ಯಾಯ ಮಾಡಿದೆ ಎಂದು ಈ ಹಿಂದೆ ದೇವೇಗೌಡರು, ಕುಮಾರಸ್ವಾಮಿ ಇಬ್ಬರೂ ಭಾಷಣ ಮಾಡಿದ್ದರು.

15 ಲಕ್ಷ ಹಣ ಎಷ್ಟು ಜನರ ಖಾತೆಗೆ ಹೋಗಿದೆ, ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸಲಿ ಎಂದು ಸವಾಲು ಹಾಕಿದರು. ಬಿಜೆಪಿಯವರು ಚಿಪ್ಪು ಅಭಿಯಾನ ಮಾಡುತ್ತಿದ್ದಾರೆ ಎಂದಾಗ, ಕನ್ನಡದ ಬಾವುಟ ಹಿಡಿದು ಹೋರಾಟ ಮಾಡುವವರು ನಾವು, ಕನ್ನಡಿಗರ ಪರವಾಗಿ ನಮ್ಮ ತೆರಿಗೆ, ನಮ್ಮ ಹಕ್ಕು ಹೋರಾಟ ಮಾಡಿದ್ದೇವೆ. ನ್ಯಾಯಯುತವಾಗಿ ನಮಗೆ ಬರಬೇಕಿರುವ ಪಾಲನ್ನು ನಾವು ಕೇಳಿದ್ದೇವೆ. ಒಂದೊಮ್ಮೆ ಆ ರೀತಿ ಅವರು ಪ್ರತಿಭಟನೆ ಮಾಡಿದರೆ ಕನ್ನಡಿಗರಿಗೆ ಮಾಡುವ ಅವಮಾನ ಎಂದು ತಿರುಗೇಟು ನೀಡಿದರು.

ನೇಹಾ ಕೇಸ್‌ ಸಿಬಿಐಗೆ ಒಪ್ಪಿಸಿ, ರಾಜ್ಯ ಸರ್ಕಾರದಿಂದ ಪರಿಹಾರ ನೀಡಿ: ಕಟೀಲ್‌ ಆಗ್ರಹ

ಮುಸ್ಲಿಮರಿಗೆ ಬಿಜೆಪಿಯಿಂದ ಹಿಂಸೆ: ಮುಸ್ಲಿಂ ಧರ್ಮದವರಿಗೆ ಚಿತ್ರಹಿಂಸೆ ನೀಡಿ ಈ ದೇಶ ಬಿಟ್ಟು ಹೋಗಬೇಕು ಎನ್ನುವಂತಹ ವಾತಾವರಣ ಬಿಜೆಪಿ ನಿರ್ಮಾಣ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ. ನಾವು ಸಂವಿಧಾನದ ಪ್ರಕಾರ ನಡೆಯುತ್ತಿದ್ದೇವೆ. ಹೀಗಾಗಿ ಯಾವುದೇ ಧರ್ಮದವರು ತಪ್ಪು ಮಾಡಿದರೂ ರಕ್ಷಿಸುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ