ಬಿಜೆಪಿ ಮುಖಂಡ ಯತ್ನಾಳ್‌ಗೆ ಬಂತು ವಾರ್ನಿಂಗ್

Kannadaprabha News   | Asianet News
Published : Feb 23, 2021, 09:46 AM IST
ಬಿಜೆಪಿ ಮುಖಂಡ ಯತ್ನಾಳ್‌ಗೆ ಬಂತು ವಾರ್ನಿಂಗ್

ಸಾರಾಂಶ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಖಡಕ್ ವಾರ್ನಿಂಗ್ ನೀಡಲಾಗಿದೆ. ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸದಂತೆ ಎಚ್ಚರಿಸಲಾಗಿದೆ. 

 ನವದೆಹಲಿ (ಫೆ.23):  ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಗರಂ ಆಗಿರುವ ಬಿಜೆಪಿ ಹೈಕಮಾಂಡ್‌, ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸದಂತೆ ಕಟ್ಟು​ನಿ​ಟ್ಟಿನ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೈಕಮಾಂಡ್‌ ಬಲಾವ್‌ ಹಿನ್ನೆಲೆಯಲ್ಲಿ ಯತ್ನಾಳ್‌ ಸೋಮವಾರ ದೆಹ​ಲಿಗೆ ತೆರಳಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಯತ್ನಾಳ್‌ ಅವರ ಬಹಿ​ರಂಗ ಹೇಳಿ​ಕೆ​ಗಳ ಕುರಿತು ಅವರು ತೀವ್ರ ಆಕ್ಷೇಪ ವ್ಯಕ್ತ​ಪ​ಡಿ​ಸಿ​ದ್ದಾರೆ ಎನ್ನ​ಲಾ​ಗಿ​ದೆ.

ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್ ...

ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದ್ದು, ಸರ್ಕಾರ ಸಮುದಾಯದ ಬೇಡಿಕೆ ಈಡೇರಿಸಬೇಕಿದೆ ಎಂದು ಯತ್ನಾಳ್‌ ತಿಳಿ​ಸಿ​ದಾ​ಗಲೂ ಈ ಸಂಬಂಧ ಯಾವುದೇ ರೀತಿಯ ಬಹಿ​ರಂಗ ಹೇಳಿಕೆ ನೀಡದಂತೆ ನಡ್ಡಾ ನಿರ್ದೇ​ಶನ ನೀಡಿ​ದ್ದಾರೆ. ಪಕ್ಷದಲ್ಲಿ ಮುಂದುವರಿಯಲು ಬಯಸಿದಲ್ಲಿ, ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸಬಾರದು. ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಇರುಸು ಮುರುಸು ಉಂಟು ಮಾಡುವ ನಡೆ ಮುಂದು​ವ​ರಿ​ದರೆ ಶಿಸ್ತು ಕ್ರಮ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದ್ದು, ತಮ್ಮ ಭೇಟಿ ಬಳಿಕ ಪಕ್ಷದ ಶಿಸ್ತು ಪಾಲನಾ ಸಮಿತಿ ಎದುರು ಹಾಜರಾಗುವಂತೆಯೂ ನಡ್ಡಾ ಸೂಚಿಸಿದ್ದಾರೆ ಎಂದು ತಿಳಿದು ಬಂದಿ​ದೆ.

ಹೈಕ​ಮಾಂಡ್‌ ಸೂಚನೆ ಹಿನ್ನೆ​ಲೆ​ಯಲ್ಲಿ ದಿಢೀರ್‌ ದೆಹ​ಲಿಗೆ ದೌಡಾ​ಯಿ​ಸಿದ್ದ ಯತ್ನಾಳ್‌ ಮಾಧ್ಯ​ಮ​ಗ​ಳಿಂದಲೂ ದೂರ​ವು​ಳಿ​ದಿದ್ದು, ಕರ್ನಾ​ಟಕ ಭವ​ನದ ಬದ​ಲು ಖಾಸಗಿ ಹೋಟೆಲ್‌ನಲ್ಲಿ ಉಳಿ​ದು​ಕೊಂಡಿ​ದ್ದಾ​ರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ