ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ

Published : Apr 11, 2024, 07:16 AM IST
ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ

ಸಾರಾಂಶ

 ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವದ ಬೃಹತ್‌ ಚುನಾವಣಾ ಹಬ್ಬ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ.

ನವದೆಹಲಿ: ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವದ ಬೃಹತ್‌ ಚುನಾವಣಾ ಹಬ್ಬ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ.

ನೂರು ಕೋಟಿ ಜನರು ಭಾಗಿಯಾಗುವ ವಿಶ್ವದ ಅತಿದೊಡ್ಡ ಚುನಾವಣೆ ಪ್ರಕ್ರಿಯೆ ಮತ್ತು ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರ ರಣತಂತ್ರ ವೀಕ್ಷಿಸಲು ಆಗಮಿಸುವಂತೆ ಭಾರತೀಯ ಜನತಾ ಪಕ್ಷ ಈ ಆಹ್ವಾನ ನೀಡಿದೆ. ಈ ಪೈಕಿ 13 ಪಕ್ಷಗಳು ಈಗಾಗಲೇ ತಮ್ಮ ಆಗಮನವನ್ನು ಖಚಿತಪಡಿಸಿವೆ. ಈ ಪಕ್ಷಗಳ ಪ್ರತಿನಿಧಿಗಳು 3 ಅಥವಾ 4ನೇ ಹಂತದ ಚುನಾವಣೆ ವೇಳೆ ಭಾರತಕ್ಕೆ ಆಗಮಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಭಾರತದ ಚುನಾವಣೆಯ ಸ್ವಾರಸ್ಯವನ್ನು ಅನುಭವಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಎಂಕೆ ಬಳಿ ಭ್ರಷ್ಟಾಚಾರದ ಕಾಪಿರೈಟ್‌ : ಮೋದಿ ವಾಗ್ದಾಳಿ

ಯಾರಿಗುಂಟು? ಯಾರಿಗಿಲ್ಲ?: ಅಮೆರಿಕದ ಚುನಾವಣಾ ಪದ್ಧತಿಯೇ ಬೇರೆ ಆಗಿರುವ ಕಾರಣ ಅಲ್ಲಿನ ಎರಡೂ ಪ್ರಮುಖ ಪಕ್ಷಗಳಿಗೆ ಆಹ್ವಾನ ನೀಡಿಲ್ಲ. ಇನ್ನು ಭಾರತದ ಕಡುವೈರಿ ಪಾಕಿಸ್ತಾನದ ಯಾವುದೇ ಪಕ್ಷ ಹಾಗೂ ಚೀನಾದ ಕಮ್ಯನಿಸ್ಟ್‌ ಪಕ್ಷಕ್ಕೆ ಕೂಡಾ ಕರೆ ನೀಡಿಲ್ಲ. ಆದರೆ ನೇಪಾಳದ ಕಮ್ಯುನಿಸ್ಟ್‌ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ಗೆ ಆಹ್ವಾನ ನೀಡಲಾಗಿದೆ. ಆದರೆ ಬಾಯ್ಕಾಟ್‌ ಭಾರತ ಅಭಿಯಾನ ನಡೆಸುತ್ತಿರುವ ವಿಪಕ್ಷ ಬಿಎನ್‌ಪಿಗೆ ಕರೆ ನೀಡಿಲ್ಲ.

ಭೇಟಿ ಹೇಗೆ?: ವಿದೇಶಿ ಗಣ್ಯರಿಗೆ ಮೊದಲಿಗೆ ದೆಹಲಿಯಲ್ಲಿ ಭಾರತೀಯ ಚುನಾವಣಾ ಪದ್ಧತಿ ಬಗ್ಗೆ ಮಾಹಿತಿ ನೀಡಲಾಗುವುದು. ನಂತರ 5-6 ವೀಕ್ಷಕರ ತಂಡ ರಚನೆ ಮಾಡಿ ಅವರನ್ನು 4-5 ಚುನಾವಣಾ ಕ್ಷೇತ್ರಕ್ಕೆ ಕರೆದೊಯ್ದ ಅಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿಸಲಾಗುವುದು. ಅಲ್ಲದೆ ಮೋದಿ, ಅಮಿತ್‌ ಶಾ, ಜೆ.ಪಿ.ನಡ್ಡಾ ಮೊದಲಾದ ಬಿಜೆಪಿ ರ್‍ಯಾಲಿಗಳಿಗೂ ಕರೆದೊಯ್ಯಲಾಗುವುದು ಎನ್ನಲಾಗಿದೆ.

ಪಂಜಾಬ್‌ನಲ್ಲಿ ಈ ಬಾರಿ ಚತುಷ್ಕೋನ ಸಮರ; ಗೆಲ್ಲೋದ್ಯಾರು?

ಬಿಜೆಪಿ ಬಗ್ಗೆ ತಿಳಿದುಕೊಳ್ಳಿ ಅಭಿಯಾನದ ಭಾಗವಾಗಿ ಈಗಾಗಲೇ 70ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!