Karnataka election 2023: ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸುರ್ಜೇವಾಲ ವಾಗ್ದಾಳಿ

Published : Mar 06, 2023, 02:53 PM IST
Karnataka election 2023: ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸುರ್ಜೇವಾಲ ವಾಗ್ದಾಳಿ

ಸಾರಾಂಶ

ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ; ಭ್ರಷ್ಟ ಜನತಾ ಪಾರ್ಟಿ. ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ

ಹಾವೇರಿ (ಮಾ.6) : ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ; ಭ್ರಷ್ಟ ಜನತಾ ಪಾರ್ಟಿ. ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep singh surjewala) ವಾಗ್ದಾಳಿ

ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರವನ್ನು ಬೊಮ್ಮಾಯಿ(CM Basavaraj bommai) ಸರ್ಕಾರ ಅನ್ನುವುದಕ್ಕಿಂತ ಭ್ರಷ್ಟಾಸುರ ಸರ್ಕಾರ ಅನ್ನಬೇಕು. ಬೊಮ್ಮಾಯಿ ಸರ್ಕಾರ(Curruption govt )ಅಪರಾಧಿಗಳು, ಭ್ರಷ್ಟರ ಜತೆ ಶಾಮೀಲಾಗಿದೆ ಎಂದರು.

ಮೈಸೂರು ಸೋಪಿನ ಸುಗಂಧವನ್ನೂ ಮಾರಿದ ಬಿಜೆಪಿ: ಸುರ್ಜೇವಾಲಾ ಕಿಡಿ

ಬಿಜೆಪಿಯವರು 40% ಸರ್ಕಾರ ಎಂಬ ಆರೋಪಕ್ಕೆ ಸಾಕ್ಷಿ ತಗೊಂಡು ಬನ್ನಿ ಅಂತಿದ್ರು. ಈಗ ಬಿಜೆಪಿ ಶಾಸಕ(Madalu virupakakshappa)ನ ಮನೆಯಲ್ಲಿ 8 ಕೋಟಿ ರೂ. ಸಿಕ್ಕಿದೆ. ವಿರೂಪಾಕ್ಷಪ್ಪ ಅವರನ್ನು ಯಾವಾಗ ಹಿಡಿಯುತ್ತೀರಿ? ಕಳೆದ ನಾಲ್ಕು ದಿನಗಳಿಂದ ಸಿಕ್ಕಿಲ್ಲ. ಬಿಜೆಪಿ ಭ್ರಷ್ಟ, ಕಮಿಷನ್ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.

ನಾವು ಹಲವು ಭರವಸೆಗಳನ್ನು ನೀಡಿದ್ದೇವೆ. ಇಂದು ಆ ಭರವಸೆಗಳಿಗೆ ಗ್ಯಾರಂಟಿ ಕಾರ್ಡ್(Congress Guarantee card) ನೀಡ್ತಾ ಇದ್ದೇವೆ. 200 ಯುನಿಟ್ ವಿದ್ಯುತ್ ಫ್ರೀ   ಕೊಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಪಕ್ಷ ಜಾತಿ, ಧರ್ಮದ ಬಂಧನ , ಭೇಧ ಭಾವ ಇಲ್ಲದೇ ಎಲ್ಲರಿಗೂ ಯೋಜನೆಗಳನ್ನು ರೂಪಿಸಿದೆ. ಮಹಿಳಾ ಯಜಮಾನಿಗೆ 2000 ರೂಪಾಯಿ ಸಹಾಯ ಧನ ನೀಡುವ ಭರವಸೆ ನೀಡಿದ್ದೇವೆ ಮುಂದಿನ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೆಸೆಯಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಭರವಸೆ ವ್ಯಕ್ತಪಡಿಸಿದರು.

 

ಕರ್ನಾಟಕ 40 ಪರ್ಸೆಂಟ್‌ ಕಮಿಷನ್‌ಗೆ ಹೆಸರುವಾಸಿ: ಬಿಜೆಪಿ ವಿರುದ್ದ ಸುರ್ಜೆವಾಲಾ ವಾಗ್ದಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!