ಬಿಜೆಪಿಯವ್ರು ಬ್ರಿಟಿಷರಿಗಿಂತ ಡೇಂಜರ್; ಮಾಗಡಿ ಶಾಸಕ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ!

Published : Nov 27, 2023, 10:01 AM IST
ಬಿಜೆಪಿಯವ್ರು ಬ್ರಿಟಿಷರಿಗಿಂತ ಡೇಂಜರ್; ಮಾಗಡಿ ಶಾಸಕ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ!

ಸಾರಾಂಶ

ದೇಶದಲ್ಲಿ ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಬ್ರಿಟಿಷರಿಗಿಂತ ಬಿಜೆಪಿ ಡೇಂಜರ್ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಗಡಿ (ನ.27): ದೇಶದಲ್ಲಿ ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಬ್ರಿಟಿಷರಿಗಿಂತ ಬಿಜೆಪಿ ಡೇಂಜರ್ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಗಡಿ ತಾಲ್ಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಶಾಸಕ ಬಾಲಕೃಷ್ಣ, ಬಿಜೆಪಿಯವರು ಬ್ರಿಟಿಷರಿದ್ದಂಗೆ ಯಾರು ಪ್ರಬಲರಾಗಿರುತ್ತಾರೆ. ಅವರ ಮಧ್ಯೆ ಗುಂಪು ಕಟ್ಟಿ ಎತ್ತಿಕಟ್ಟುವ ಕೆಲಸ ಬಿಜೆಪಿ ಮಾಡ್ತಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಗೆ ಬಂದಿರುವ ಸ್ಥಿತಿ ಕರ್ನಾಟಕದಲ್ಲಿ ಜೆಡಿಎಸ್ ಗೆ ಬರುತ್ತದೆ. ಈಗಲೇ ಜೆಡಿಎಸ್ ಪಕ್ಷದವರು ಎಚ್ಚೆತ್ತುಕೊಳ್ಳದಿದ್ದರೆ ಅವರ ಅಸ್ಥಿತ್ವವನ್ನು ಸಂಪೂರ್ಣ ಮುಗಿಸುವ ಕೆಲಸ ಬಿಜೆಪಿ ಮಾಡುತ್ತದೆ ಎನ್ನುವ ಮೂಲಕ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಿಡಿಕಾರಿದರು.

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಶಾಸಕ ಬಾಲಕೃಷ್ಣ

ಮಾಯಾವತಿ ಮುಂದಿನ ಪ್ರಧಾನಿ ಎಂದು ಹೇಳ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಮಾಯಾವತಿ ಅವರ ಹೆಸರಿಲ್ಲದಂತೆ ಮಾಡಿಬಿಟ್ಟರು. ಇನ್ನು ಕರ್ನಾಟಕದಲ್ಲಿ ಕುಮಾರಣ್ಣ ಯಾವ ಲೆಕ್ಕ. ನಮ್ಮನ್ನು ನೋಡಿದ ತಕ್ಷಣ ಕುಮಾರಣ್ಣ ಬಿಜೆಪಿಯವರನ್ನು ತಬ್ಬಿಕೊಳ್ಳುತ್ತಾರೆ. ಹಲವು ವರ್ಷಗಳಿಂದ ನಾವು ಜಾತ್ಯಾತೀತ, ಜಾತ್ಯಾತೀತ ಎಂದು ಹೇಳ್ತಿದ್ದ ಜನತಾದಳ ಮತ್ತು ದೇವೇಗೌಡರು ಇಳಿವಯಸ್ಸಿನಲ್ಲಿ ಅದು ಸಾಯುವ ಕಾಲದಲ್ಲಿ ಕುಮಾರಣ್ಣ ದೇವೇಗೌಡರನ್ನು ಕೋಮುವಾದಿ ಮಾಡಿಬಿಟ್ರು ಎಂದು ಛೇಡಿಸಿದರು.

ಡಿಕೆಶಿ ವೈಯಕ್ತಿಕ ವಿಚಾರಕ್ಕೆ ಯಾಕೆ ಹೋಗ್ತೀರಿ? : ಎಚ್‌ಡಿಕೆಗೆ ಮಾಗಡಿ ಶಾಸಕ ತಿರುಗೇಟು

ಕಳೆದ ಭಾರಿ ಪುಲ್ವಾಮ ದಾಳಿಯಾಗದಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗ್ತಿರಲಿಲ್ಲ. ದೇಶದಲ್ಲಿ ಅಮಾಯಕ ಸೈನಿಕರನ್ನು ಬಲಿ ಕೊಟ್ಟಂತಹ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಸೈನಿಕರನ್ನು ಬಲಿ ಕೊಟ್ಟು ಮೋದಿ ಅಧಿಕಾರಕ್ಕೆ ಬರ್ತಾರೆ ಎಂದು ಲೇವಡಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು