ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

Published : Feb 12, 2021, 02:23 PM ISTUpdated : Feb 12, 2021, 04:17 PM IST
ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ಸಾರಾಂಶ

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಅವರಿಗೆ ಕೇಂದ್ರ ಬಿಜೆಪಿ ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು, (ಫೆ.12): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರ ವಿರುದ್ಧ ಅಬ್ಬರಿಸಿ ಬೊಬ್ಬರಿತ್ತಿರುವ ವಿಜಯಪುರ ಬಿಜೆಪಿ ಶಾಸಕ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೊನೆಗೂ ನೋಟಿಸ್ ಜಾರಿ ಮಾಡಲಾಗಿದೆ.

"

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸಿ ನೀಡಿದ್ದು, ಒಂದು ವಾರದೊಳಗೆ ಉತ್ತರಿಸುವಂತೆ ಖಡಕ್ ಸೂಚನೆ ಸಹ ಕೊಟ್ಟಿದೆ. 

ಯಾವುದಕ್ಕೂ ಡೋಂಟ್ ಕೇರ್: ಸಿಎಂ ಸಭೆಯಲ್ಲೂ ಸಿಡಿದೆದ್ದ ಯತ್ನಾಳ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗುತ್ತಾರೆ ಎಂಬಿತ್ಯಾದಿ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.

ಸಚಿವ ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಯತ್ನಾಳ್ 'ಸಿಡಿ' ಬಾಂಬ್ ಸಿಡಿಸಿದ್ದರು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.

ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Delhi Liquor Scam: ಕೇಜ್ರಿವಾಲ್ ಮೊಸಳೆ ಕಣ್ಣೀರು ಸುರಿಸುವುದು ಬೇಡ, ಸತ್ಯ ಹೊರಬರಲಿದೆ - ಸಿಎಂ ರೇಖಾ ಗುಪ್ತಾ ಕಿಡಿ
Kejriwal Case: ಬಿಜೆಪಿಯ ಆಟ ನಡೆಯಲ್ಲ ಅಂತ ಕೇಜ್ರಿವಾಲ್ ಪ್ರೂವ್ ಮಾಡಿದ್ದಾರೆ: ಆದಿತ್ಯ ಠಾಕ್ರೆ ಮೆಚ್ಚುಗೆ