ಪಕ್ಷ ತೊರೆದವರಿಗೆ ಬಾಗಿಲು ಬಂದ್‌: ಅರುಣ್‌ ಸಿಂಗ್‌

Published : Apr 15, 2023, 07:44 AM ISTUpdated : Apr 15, 2023, 07:54 AM IST
ಪಕ್ಷ ತೊರೆದವರಿಗೆ ಬಾಗಿಲು ಬಂದ್‌: ಅರುಣ್‌ ಸಿಂಗ್‌

ಸಾರಾಂಶ

ಐದಾರು ಮಂದಿ ಪಕ್ಷ ತೊರೆದರೆ ಬಿಜೆಪಿಗೆ ನಷ್ಟವೇನಿಲ್ಲ, ಸೋತರೂ ಸ್ಥಾನಮಾನ ಪಡೆದಿದ್ದ ಬಗ್ಗೆ ಸವದಿ ಯೋಚಿಸಬೇಕು: ಅರುಣ್‌ ಸಿಂಗ್‌ 

ಬೆಂಗಳೂರು(ಏ.15):  ಪಕ್ಷವನ್ನು ಬಿಟ್ಟು ಹೋಗುವವರಿಗೆ ಸದ್ಯಕ್ಕೆ ಮತ್ತೆ ಪಕ್ಷದ ಬಾಗಿಲು ತೆರೆಯುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾಯದರ್ಶಿಯೂ ಆಗಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ಮಂದಿ ಪಕ್ಷ ತೊರೆದರೂ ನಷ್ಟವೇನಿಲ್ಲ. ಕಾಂಗ್ರೆಸ್‌ ಸೇರಿದ ಬಳಿಕ ಅವರೇ ಪಶ್ವಾತಾಪ ಪಡುತ್ತಾರೆ. ಬಿಜೆಪಿ ಪಕ್ಷದಲ್ಲಿ ಲಕ್ಷಾಂತರ ಕಾರ್ಯಕರ್ತರು ಶಾಸಕ, ಸಂಸದರಾಗದೇ ಕೆಲಸ ಮಾಡುತ್ತಲೇ ಇದ್ದಾರೆ. ಟಿಕೆಟ್‌ ಸಿಗದಿದ್ದಾಗ ಅಸಮಾಧಾನಗೊಳ್ಳುವುದು ಸಹಜ. ಆದರೆ, ಉನ್ನತ ಸ್ಥಾನಮಾನ ಪಡೆದರೂ ಸ್ವಾರ್ಥಕ್ಕಾಗಿ ಪಕ್ಷ ತೊರೆಯುವುದನ್ನು ಜನರು ಮತ್ತು ಮತದಾರರು ಮರೆಯುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.

Karnataka Assembly Elections 2023: ಬಿಜೆಪಿ ತೊರೆದು ಸವದಿ ಕಾಂಗ್ರೆಸ್‌ಗೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ, ವಿಧಾನ ಪರಿಷತ್‌ ಸದಸ್ಯ ಸ್ಥಾನ ನೀಡಲಾಯಿತು. ಅಲ್ಲದೆ ಪಕ್ಷದ ಉನ್ನತ ಸಮಿತಿಗಳಲ್ಲೂ ಸಾಥ್‌ ನೀಡಲಾಗಿತ್ತು. ಇದರ ಕುರಿತು ಅವರೇ ಯೋಚಿಸಬೇಕು ಎಂದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?