
ಬೆಂಗಳೂರು (ನ.24): ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಪಕ್ಷದ ಸಂಘಟನಾ ಪ್ರವಾಸ ಕೈಗೊಳ್ಳದ ಸಚಿವರು, ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳಿಗೆ ಸಂತೋಷ್ ಎಚ್ಚರಿಕೆ ನೀಡಿದ್ದಾರೆ. ನೀವು ಎಷ್ಟೇ ಪ್ರಭಾವಿಗಳು, ಪ್ರಬುದ್ದರು ಇರಬಹುದು. ನಿಮ್ಮ ಪ್ರಬುದ್ಧತೆಯ ಬಗ್ಗೆ ನಮಗೆ ಗೌರವ ಇದೆ. ಆದರೆ ಪಕ್ಷದ ಕೆಲಸ, ಸಂಘಟನೆ ಕೆಲಸ ಮಾಡದೇ ಇದ್ದರೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಸಭೆಯಲ್ಲಿ ಹೇಳಿದ್ದಾರೆ.
ಪಂಚಾಯತ್ ಚುನಾವಣೆಗೆ ಬಿಜೆಪಿ ಪಂಚತಂತ್ರ
ಜನ ಲೈಬ್ರೆರಿಗೆ ಬರುತ್ತಾರೆ. ಜನ ನಿಮ್ಮ ಬಳಿ ಬರಲು ನೀವೇನು ಲೈಬ್ರರಿಯೇ..? ಪ್ರವಾಸ ಮಾಡದೇ, ಸಂಘಟನೆ ಮಾಡದೇ ಇದ್ದರೆ ನೀವು ಪ್ರಭಾವಿಗಳಾಗಿದ್ದು ಏನು ಪ್ರಯೋಜನ? ನೀವು ಪ್ರವಾಸ ಮಾಡಲೇಬೇಕು. ನೀವು ಪ್ರವಾಸ ಮಾಡದೇ ಇದ್ದರೆ ಕಾರ್ಯಕರ್ತರಿಗೆ ತಿಳಿಯುವುದಾದರೂ ಹೇಗೆ...? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದ್ದ ಗ್ರಾಮ ಪಂಚಾಯತ್ ಚುನಾವಣೆ ಸಂಬಂಧ ನಡೆದಿದ್ದ ಸಂಘಟನಾ ಸಭೆಯ ವೇಳೆಯಲ್ಲಿ ಬಿಜೆಪಿ ಮುಖಂಡರಿಗೆ ಖಡಕ್ ಎಚ್ಚರಿಕೆಯನ್ನು ಬಿ.ಎಲ್. ಸಂತೋಷ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.