ಸಿಎಂ ಆಗಬೇಕೆಂದು ಗಡ್ಡ ಬಿಟ್ಟಿದ್ದಲ್ಲ: ಸಿ.ಟಿ.ರವಿ

Kannadaprabha News   | Asianet News
Published : Aug 02, 2021, 07:19 AM IST
ಸಿಎಂ ಆಗಬೇಕೆಂದು ಗಡ್ಡ ಬಿಟ್ಟಿದ್ದಲ್ಲ: ಸಿ.ಟಿ.ರವಿ

ಸಾರಾಂಶ

ನಾನಂತೂ ಮುಖ್ಯಮಂತ್ರಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ - ಸಿ ಟಿ ರವಿ ಗಡ್ಡ ಬಿಟ್ಟಿರುವವರು ಮುಂದಿನ ದಿನಗಳಲ್ಲಿ ಸಿಎಂ ಆಗ್ತಾ ಎಂದು ವಿಜಯನಗರ ಮೈಲಾರಲಿಂಗ ಭವಿಷ್ಯ

ಚಿಕ್ಕಮಗಳೂರು (ಆ.02): ನಾನಂತೂ ಮುಖ್ಯಮಂತ್ರಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗಡ್ಡ ಬಿಟ್ಟಿರುವವರು ಮುಂದಿನ ದಿನಗಳಲ್ಲಿ ಸಿಎಂ ಆಗ್ತಾ ಎಂದು ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸುದ್ದಿಗಾರರು ಭಾನುವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡ ಬಿಡೋದು, ತಿಲಕ ಇಡುವುದು ನನ್ನ ಐಡೆಂಟಿಟಿ. ಗಡ್ಡಧಾರಿ ಅಂತ ಅವರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರಾರ‍ಯರು ಮುಖ್ಯಮಂತ್ರಿ ಆಗಬೇಕು ಅಂತಾ ಆಕಾಂಕ್ಷಿ ಇರುತ್ತಾರೋ ಅವರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ಹೇಳಿದರು.

ಮಾರ್ಚ್‌ನಲ್ಲಿ ​ ಗಡ್ಡಧಾರಿ ವ್ಯಕ್ತಿ ಸಿಎಂ-ಮೈಲಾರಲಿಂಗೇಶ್ವರನ ಭವಿಷ್ಯ: ಯಾರು ಆ ಗಡ್ಡಧಾರಿ?

ನನಗೆ ಪಕ್ಷ ನಿಷ್ಟೆ, ಶ್ರಮದ ಮೇಲೆ ನಂಬಿಕೆ ಇರೋದು, ಏನೇನೂ ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ ಎಂದ ಅವರು, ಸಿಎಂ ಆಗಬೇಕೆಂದು ಗಡ್ಡ ಬಿಟ್ಟಿದ್ದಲ್ಲ ಎಂದರು.

ಸಿಎಂ ಆಗಲು ಯೋಗಬೇಕು:

ಸಿಎಂ ರೇಸ್‌ ವಿಚಾರದಲ್ಲಿ 15 ದಿನಗಳಿಂದ ಮಾಧ್ಯಮಗಳಲ್ಲಿ ಹೆಸರು ಬರ್ತಾ ಇತ್ತು. ನಾನೊಬ್ಬನೇ ಅಲ್ಲ ಹಲವರ ಹೆಸರು ಇತ್ತು. ಸಿಎಂ ಆಗಲು ಯೋಗ ಇರಬೇಕು. ಈಗ ಬೊಮ್ಮಯಿ ಅವರಿಗೆ ಯೋಗ ಕೂಡಿ ಬಂದಿದೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.

ಸಿಎಂ ಒಳ್ಳೆಯ ಕೆಲ್ಸ ಮಾಡ್ತಾರೆ ಎಂಬ ನಿರೀಕ್ಷೆ ಇದೆ. ಎಲ್ಲ ರೀತಿಯ ಸಹಕಾರವನ್ನು ಕೊಡ್ತೀವಿ ಅವರು ನಮ್ಮ ಸ್ನೇಹಿತರು, ಒಡನಾಡಿಗಳು. ರಾಜ್ಯದ ಹಿತಕ್ಕೆ ಅವರು ಮಾಡುವ ಕೆಲಸಕ್ಕೆ ನಮ್ಮ ಬೆಂಬಲ ಇರುತ್ತೇ ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.

ರಾಜ್ಯದ ಹಿತದ ಆದ್ಯತೆ ಇಟ್ಕೊಂಡು ಸಂಪುಟ ವಿಸ್ತರಣೆ ಮಾಡಲಿ. ಸಾಮಾಜಿಕ, ಪ್ರಾದೇಶಿಕ ಸಮತೋಲನ ಎರಡನ್ನು ಕಾಪಾಡಿಕೊಂಡು ವಿಸ್ತರಣೆ ಮಾಡ್ತಾರೆ ಎಂಬ ವಿಶ್ವಾಸ ಇದೆ. ಇತ್ತೀಚೆಗೆ ಪ್ರಧಾನಿಯವರು ಕೇಂದ್ರ ಸಂಪುಟವನ್ನು ವಿಸ್ತರಣೆ ಮಾಡಿದರು. ಆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನ ಇತ್ತು. ಸಿಎಂ, ಒಳ್ಳೆ ಸಂಪುಟ ರಚನೆ ಮಾಡಿ ಅವರ ನೇತೃತ್ವದಲ್ಲೇ ಮತ್ತೆ ಚುನಾವಣೆ ಗೆದ್ದು ಬರಬೇಕು. ಆ ರೀತಿ ವಿಸ್ತರಣೆ ಮಾಡ್ತಾರೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!