
ಚಿಕ್ಕಮಗಳೂರು, (ಡಿ. 26): PFI ಬಾಲ ಬಿಚ್ಚಿದರೆ ಬಾಲಾನೂ ಕಟ್, ತಲೆನೂ ಕಟ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಚೇರಿಗೆ PFI ಕಾರ್ಯಕರ್ತರ ಮುತ್ತಿಗೆ ಹಾಕಿದ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ತನಿಖೆ ಮಾಡಬಾರದು ಎನ್ನುವುದಕ್ಕೆ ಅವರು ಯಾರು? ಭಾರತ ಇರುವುದು ಭಯೋತ್ಪಾದನೆ ಮಾಡುವುದಕ್ಕೆ ಅಲ್ಲ. ಭಯೋತ್ಪಾದನೆಗೆ ವಿದೇಶದಿಂದ ಬರುವ ಹಣದ ತಡೆಗೆ ತನಿಖೆ ನಡೆಸಬೇಕಿದೆ. ಹಣ ಬರುವುದನ್ನು ತಡೆಯುವುದಕ್ಕೆ ತನಿಖೆ ನಡೆಯಬೇಕಿದೆ ಎಂದು ಹೇಳಿದರು.
PFI ಮುಖಂಡರ ಮೇಲೆ ಇಡಿ ತನಿಖೆ; ನಳೀನ್ ಕುಮಾರ್ ಕಚೇರಿ ಮೇಲೆ ಪ್ರತಿಭಟನೆ
FI ಮುಖಂಡರ ಮೇಲೆ ಇಡಿ ತನಿಖೆ ಮಾಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ನಳೀನ್ ಕುಮಾರ್ ಕಟೀಲ್ ಕಚೇರಿ ಮೇಲೆ ಮುತ್ತಿಗೆ ಯತ್ನಿಸಿದ್ದಾರೆ. ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.