ಬಜರಂದಳ ಬ್ಯಾನ್‌: ಕಾಂಗ್ರೆಸ್‌ ತನ್ನ ಗುಂಡಿಯನ್ನು ತಾನೇ ತೋಡಿಕೊಂಡಂತೆ, ಸದಾನಂದ ಗೌಡ

Published : May 03, 2023, 02:30 AM IST
ಬಜರಂದಳ ಬ್ಯಾನ್‌: ಕಾಂಗ್ರೆಸ್‌ ತನ್ನ ಗುಂಡಿಯನ್ನು ತಾನೇ ತೋಡಿಕೊಂಡಂತೆ, ಸದಾನಂದ ಗೌಡ

ಸಾರಾಂಶ

ವ್ಯಕ್ತಿಗತ ವಿಚಾರದ ಬಗ್ಗೆ ಹಾಗೂ ಹಿಂದೂ ರಾಷ್ಟ್ರದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವ ಯಾವುದೇ ಸಂಘಟನೆ ಬಗ್ಗೆ ಟೀಕಿಸುವುದು, ಬ್ಯಾನ್‌ ಮಾಡುತ್ತೇವೆ ಎಂದು ಹೆದರಿಸುವುದು ಹುಚ್ಚುತನದ ಪರಮಾವಧಿಯಾಗಿದೆ: ಡಿ.ವಿ.ಸದಾನಂದ ಗೌಡ 

ಪುತ್ತೂರು(ಮೇ.03): ಸಂಘವನ್ನು ಬ್ಯಾನ್‌ ಮಾಡಲು ಹೋಗಿ ಕಾಂಗ್ರೆಸ್‌ನ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇದೀಗ ಕಾಂಗ್ರೆಸ್‌ ಬಜರಂಗದಳವನ್ನು ಬ್ಯಾನ್‌ ಮಾಡಲು ಮುಂದಾದರೆ ಅವರ ಗುಂಡಿಯನ್ನು ಅವರೇ ತೋಡಿಕೊಂಡಂತೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಅವರು ಮಂಗಳವಾರ ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವ್ಯಕ್ತಿಗತ ವಿಚಾರದ ಬಗ್ಗೆ ಹಾಗೂ ಹಿಂದೂ ರಾಷ್ಟ್ರದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವ ಯಾವುದೇ ಸಂಘಟನೆ ಬಗ್ಗೆ ಟೀಕಿಸುವುದು, ಬ್ಯಾನ್‌ ಮಾಡುತ್ತೇವೆ ಎಂದು ಹೆದರಿಸುವುದು ಹುಚ್ಚುತನದ ಪರಮಾವಧಿಯಾಗಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಬಿಜೆಪಿ, ಕಾಂಗ್ರೆಸ್‌ ನೇರ ಹಣಾಹಣಿ

ಇಂದು ದೇಶದಲ್ಲಿ ಶಾಂತಿ, ಸುವ್ಯವಸ್ಥೆ, ಶಿಸ್ತು ಇರುವುದಕ್ಕೆ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ ಇಂತಹ ಸಂಘಟನೆಗಳು ಕಾರಣ. ಇವು ಸಮಾಜದಲ್ಲಿ ಸಮತೋಲನ ಕಾಪಾಡುತ್ತಿವೆ. ಈ ಸಂಘಟನೆಗಳಿಗೂ ರಾಜಕೀಯಕ್ಕೂ ಯಾವುದೇ ನಂಟಿಲ್ಲ. ಅವರು ಅವರಷ್ಟಕ್ಕೆ ಸಮಾಜದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ರಾಜಕಾರಣ ಮಾಡುವ ಬದಲು ಇಂತಹ ಸಂಘಟನೆ ಮೇಲೆ ಪ್ರಹಾರಕ್ಕೆ ಮುಂದಾಗಿರುವುದು ಅವರ ಗುಂಡಿಯನ್ನು ತೋಡಿಕೊಂಡಂತೆ. ಕಾಂಗ್ರೆಸ್‌ ದೇಶದಲ್ಲಿ ಉಳಿಯಬೇಕು ಎಂದಾದರೆ ಅವರ ಸುದ್ದಿಯನ್ನು ಬಿಟ್ಟು ಬಿಡಲಿ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!