ಧಾರವಾಡ: ಬಿಜೆಪಿ ಶಾಸಕ ಬೆಲ್ಲದಗೆ ಅಂಚಟಗೇರಿ ಪೈಪೋಟಿ..!

Published : Mar 23, 2023, 09:45 PM IST
ಧಾರವಾಡ: ಬಿಜೆಪಿ ಶಾಸಕ ಬೆಲ್ಲದಗೆ ಅಂಚಟಗೇರಿ ಪೈಪೋಟಿ..!

ಸಾರಾಂಶ

ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಕೆಲಸಕ್ಕೆ ತಕ್ಕಂತೆ ಉನ್ನತ ಹುದ್ದೆಗಳು ಪಕ್ಷದಿಂದ ಲಭಿಸಿವೆ. ಪಶ್ಚಿಮ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಈರೇಶ ಅಂಚಟಗೇರಿ 

ಧಾರವಾಡ(ಮಾ.23): ಈವರೆಗಿನ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇತಿಹಾಸದಲ್ಲಿ ಮೇಯರ್ ಆದವರು ಶಾಸಕರಾಗಿಲ್ಲ ಎಂಬ ಸಂಪ್ರದಾಯ ಈ ಬಾರಿ ಮುರಿಯುವ ಸಾಧ್ಯತೆಗಳು ಎದ್ದು ಕಾಣುತ್ತಿವೆ.

ಹೌದು, ಹು-ಧಾ ಪಶ್ಚಿಮ ಮತಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಶಾಸಕ ಅರವಿಂದ ಬೆಲ್ಲದ ಹೊರತು ಪಡಿಸಿ ಮತ್ತಾರೂ ಇಲ್ಲವೇ ಇಲ್ಲ ಎಂದುಕೊಳ್ಳಲಾಗಿತ್ತು. ಇದೀಗ ಪ್ರಸ್ತುತ ಮೇಯರ್ ಆಗಿರುವ ಈರೇಶ ಅಂಚಟಗೇರಿ ಸಹ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. 

ರಾಹುಲ್‌ ಭೇಟಿಯಿಂದ ರಾಜ್ಯಕ್ಕೆ ಯಾವುದೇ ಪರಿಣಾಮ ಬೀರಿಲ್ಲ: ಸಿಎಂ ಬೊಮ್ಮಾಯಿ

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಈರೇಶ ಅಂಚಟಗೇರಿ ಅವರು, ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಕೆಲಸಕ್ಕೆ ತಕ್ಕಂತೆ ಉನ್ನತ ಹುದ್ದೆಗಳು ಪಕ್ಷದಿಂದ ಲಭಿಸಿವೆ. ಪಶ್ಚಿಮ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ. ಈವರೆಗೂ ಬಿಜೆಪಿ ಬೆಲ್ಲದ ಅವರು ಸೇರಿದಂತೆ ಯಾರಿಗೆ ಟಿಕೆಟ್ ನೀಡುತ್ತೇವೆಂದು ಘೋಷಣೆ ಮಾಡಿಲ್ಲ. ಆದರೆ, ಈ ಬಾರಿ ಮಾತ್ರ ಸ್ಥಳೀಯವಾಗಿ ಟಿಕೆಟ್ ಹಂಚಿಕೆಯಾಗದೇ ಕೇಂದ್ರ ಸಂಸದೀಯ ಮಂಡಳಿಯಿಂದ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ನನಗೆ ಟಿಕೆಟ್ ಸಿಗುವ ಸಾಧ್ಯತೆಗಳೂ ಹೆಚ್ಚಿವೆ. ಒಂದು ವೇಳೆ ಬೆಲ್ಲದ ಅವರಿಗೆ ಟಿಕೆಟ್ ಘೋಷಣೆ ಮಾಡಿದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಅಂಚಟಗೇರಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ