
ಮೈಸೂರು, [ಜ.24]: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಶ್ರೀಕ್ಷೇತ್ರವು ಪ್ರತಿವರ್ಷ ಏರ್ಪಡಿಸುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು (ಶುಕ್ರವಾರ) ಹಲವು ರಾಜಕೀಯ ನಾಯಕರು ಪಾಲ್ಗೊಂಡರು.
ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ವಿಚಾರ ಸಂಕಿರಣವನ್ನ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದರು.
ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!
ಇದೇ ವೇಳೆ ಬಿಎಸ್ ಸಂತೋಷ್ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸನ್ಮಾನ ಮಾಡಿರುವುದು ವಿಶೇಷವಾಗಿದೆ. ಹೌದು. ಇದು ಅಚ್ಚರಿ ಅನ್ನಿಸಿದರೂ ಸತ್ಯ. ಇದಕ್ಕೆ ಶ್ರೀಗಳೇ ಸಾಕ್ಷಿಯಾಗಿದ್ದಾರೆ.
ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ಸಂತೋಷ್ ಅವರು ದಿನೇಶ್ ಗುಂಡೂರಾವ್ ಅವರಿಗೆ ಶಾಲು ಹೊದಿಸಿ ಹಾರ ಹಾಕಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಮೊನ್ನೇ ಅಷ್ಟೇ ಮೈಸೂರು ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಎಚ್. ವಿಶ್ವನಾಥ್ ಒಂದೇ ವೇದಿಕೆ ಕಾಣಿಸಿಕೊಂಡಿದ್ದರು.
ಅಷ್ಟೇ ಅಲ್ಲದೇ ವೇದಿಕೆ ಮೇಲೆ ಒಬ್ಬರಿಗೊಬ್ಬರು ಸಂತಸದಿಂದ ಸಮಯ ಕಳೆದಿದ್ದಲ್ಲದೇ ಈಶ್ವರಪ್ಪನವರು ಸಿದ್ದರಾಮಯ್ಯನವರ ಕಾರಿನಲ್ಲಿ ತೆರಳಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.