'ಬಿಜೆಪಿಗೆ ವಲಸೆ ಬಂದ 15 ಜನರಿಂದ ಕಚೇರಿ ಕಸ ಗುಡಿಸುತ್ತೇವೆ!'

Published : Mar 10, 2020, 08:10 AM IST
'ಬಿಜೆಪಿಗೆ ವಲಸೆ ಬಂದ 15 ಜನರಿಂದ ಕಚೇರಿ ಕಸ ಗುಡಿಸುತ್ತೇವೆ!'

ಸಾರಾಂಶ

ಬಿಜೆಪಿಗೆ ವಲಸೆ ಬಂದವರಿಂದ ಕಚೇರಿಯ ಕಸ ಗುಡಿಸುತ್ತೇವೆ!| ವಿಧಾನಸಭೆಯಲ್ಲಿ ಈಶ್ವರಪ್ಪ ಅಚ್ಚರಿಯ ಹೇಳಿಕೆ

ಬೆಂಗಳೂರು[ಮಾ.10]: ಸಚಿವ ಸ್ಥಾನ ಪಡೆದಿರುವವರೂ ಸೇರಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಇತ್ತೀಚೆಗೆ ವಲಸೆ ಬಂದು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ 15 ಮಂದಿಯಿಂದಲೂ ಬಿಜೆಪಿ ಕಚೇರಿಯ ಕಸ ಗುಡಿಸುವ ಕೆಲಸ ಮಾಡಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ ಘಟನೆ ಸೋಮವಾರ ವಿಧಾನಭೆಯಲ್ಲಿ ನಡೆಯಿತು.

ಸಂವಿಧಾನದ ವಿಚಾರ ಚರ್ಚೆ ವೇಳೆ, ಕಾಂಗ್ರೆಸ್‌ನ ಡಾ.ಜಿ.ಪರಮೇಶ್ವರ್‌ ಅವರು, ಇಂದು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ನಿಮಗೆ ಅಧಿಕಾರ ನೀಡಿದ್ದು ಸಂವಿಧಾನ. ಆದರೆ, ಸಾಕಷ್ಟು ಚುನಾವಣೆಗಳಲ್ಲಿ ಬಿಜೆಪಿಯವರು ಅಲ್ಪಸಂಖ್ಯಾತ ಸಮುದಾಯದ ಒಬ್ಬ ಅಭ್ಯರ್ಥಿಗೂ ಸ್ಪರ್ಧೆಗೆ ಅವಕಾಶ ನೀಡದ ಉದಾಹರಣೆಗಳಿವೆ. ಅಲ್ಪಸಂಖ್ಯಾತರಾರ‍ಯರೂ ನಿಮ್ಮ ಸಹೋದರರಲ್ಲವೇ ಎಂದು ಪ್ರಶ್ನಿಸಿದರು.

ಈ ವೇಳೆ, ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಮಾತನಾಡಿ ಮುಸಲ್ಮಾನರಿಗೆ ಬಿಜೆಪಿಯಿಂದ ಚುನಾವಣಾ ಸ್ಪರ್ಧೆಗೆ ಟಿಕೆಟ್‌ ಕೊಡುವುದಿಲ್ಲ ಎಂದಿಲ್ಲ. ಆದರೆ, ಈ ಸದನಕ್ಕೆ ಗೆದ್ದು ಬಂದಿರುವವರೆಲ್ಲಾ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿ ಬಂದವರು. ಹಾಗೇ ಅಲ್ಪಸಂಖ್ಯಾತರೂ ಬಂದು ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲಿ ಟಿಕೆಟ್‌ ಕೊಡುತ್ತೇವೆ ಎಂದರು.

ಆಗ ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌ ಅವರು, ಕೆಲ ತಿಂಗಳ ಹಿಂದೆ ನಿಮ್ಮ ಪಕ್ಷಕ್ಕೆ ಬಂದರಲ್ಲಾ 15ಮಂದಿ, ಅವರೆಲ್ಲರೂ ಬಿಜೆಪಿ ಕಚೇರಿ ಕಸ ಹೊಡೆದಿದ್ದರಾ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಅವರೆಲ್ಲಾ ಈಗ ಕಸ ಗುಡಿಸುತ್ತಾರೆ. ಗುಡಿಸುವಂತೆ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ