
ಹುಬ್ಬಳ್ಳಿ, [ನ.30]: ಸಚಿವ ಸಂಪುಟ ವಿಸ್ತರಣೆ ಆದ ದಿನವೇ ಮೈತ್ರಿ ಸರ್ಕಾರ ಪತನವಾಗಲಿದೆ. ಅವರ ಪಕ್ಷದ ಶಾಸಕರುಗಳು ಸಚಿವ ಸಂಪುಟ ವಿಸ್ತರಣೆಗೆ ಕಾಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು [ಶುಕ್ರವಾರ] ಮಾತನಾಡಿರುವ ಅವರು, ಸಂಪುಟ ವಿಸ್ತರಣೆಯಾಗುತ್ತಿದಂತೆ ಅವರಲ್ಲಿ ಸರ್ಕಾರ ಬೀಳಿಸೋಕೆ ಬಹಳ ಜನ ಕಾಯುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ.
ರಾಜ್ಯ ಕಾಂಗ್ರೆಸ್ ಅತೃಪ್ತಿ ಸ್ಫೋಟ?: ಮುಂಬೈಗೆ ಹೊರಟ 10 ಶಾಸಕರು!
ರಾಜ್ಯದಲ್ಲಿ ಸರ್ಕಾರ ಇದೆಯಾ? ಅನ್ನೊ ಅನುಮಾನ ಇದೆ. ಆದ್ರೆ ಮಂತ್ರಿ ಸ್ಥಾನಕ್ಕೆ ಆಸೆಪಟ್ಟು ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಜೆಡಿಎಸ್ನವರು ಸಿದ್ದರಾಮಯ್ಯನನ್ನು ಹೀನಾಯವಾಗಿ ಸೋಲಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ಗೆ ಇಂತಹ ದು:ಸ್ಥಿತಿ ಎಂದೂ ಬಂದಿರಲಿಲ್ಲ. ಇದು ಸರ್ಕಾರನೇನ್ರೀ, ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವಾಗುತ್ತಿಲ್ಲ. ಇದು ದೇವೇಗೌಡ- ರೇವಣ್ಣ ಸರ್ಕಾರ! ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕೆ. ಎಸ್ ಈಶ್ವರಪ್ಪ ಲೇವಡಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.