
ನವದೆಹಲಿ [ಅ.23]: 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಬಿಜೆಪಿಯ ಮುನಿರಾಜು ಗೌಡ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಹೇರಿದ್ದ 3 ವರ್ಷಗಳ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡಿತಗೊಳಿಸಲಾಗಿದೆ.
2014ರ ಲೋಕಸಭಾ ಚುನಾವಣೆಯ ವೆಚ್ಚದ ವಿವರವನ್ನು ಸೂಕ್ತ ರೀತಿಯಲ್ಲಿ ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಚುನಾವಣಾ ಆಯೋಗವು ಸಂಸತ್ತಿನ ಉಭಯ ಸದನ ಅಥವಾ ರಾಜ್ಯ ವಿಧಾನಸಭೆ ಅಥವಾ ವಿಧಾನ ಪರಿಷತ್ಗೆ 3 ವರ್ಷಗಳ ಕಾಲ ಸ್ಪರ್ಧಿಸಲು ನಿಷೇಧ ಹೇರಿ 2019ರ ಜ.9ರಂದು ಆದೇಶ ಹೊರಡಿಸಿತ್ತು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದರ ವಿರುದ್ಧ ಮುನಿರಾಜು ಗೌಡ ಅವರು ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅಲ್ಲದೆ ಈ ಕುರಿತು 2019ರ ಅ.9ರಂದು ಖುದ್ದು ಹಾಜರಾಗಿ, ವಿವರ ಸಲ್ಲಿಕೆ ಕುರಿತು ಮಾಹಿತಿ ನೀಡಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ಚುನಾವಣಾ ಆಯೋಗವು 2019ರ ಅ.17ರಂದು ಆದೇಶವೊಂದನ್ನು ಹೊರಡಿಸಿದ್ದು, ಅದರಲ್ಲಿ ಆದೇಶ ಪ್ರಕಟಗೊಂಡ ದಿನಕ್ಕೆ ನಿಷೇಧದ ಅವಧಿ ಮುಕ್ತಾಯಗೊಳ್ಳಲಿದೆ ಎಂದು ಪ್ರಕಟಿಸಿದೆ. ಹೀಗಾಗಿ 3 ವರ್ಷದ ನಿಷೇಧದ ಅವಧಿ 9 ತಿಂಗಳು 9 ದಿನಕ್ಕೆ ಮುಕ್ತಾಯಗೊಂಡಂತೆ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.