ಕಾಂಗ್ರೆಸ್‌ ಸರ್ಕಾರ ತಿಗಣೆಯಂತೆ ಜನರ ರಕ್ತ ಹೀರುತ್ತಿದೆ: ರಾಜೀವ ವಾಗ್ದಾಳಿ

Published : Jan 25, 2025, 12:29 PM IST
ಕಾಂಗ್ರೆಸ್‌ ಸರ್ಕಾರ ತಿಗಣೆಯಂತೆ ಜನರ ರಕ್ತ ಹೀರುತ್ತಿದೆ: ರಾಜೀವ ವಾಗ್ದಾಳಿ

ಸಾರಾಂಶ

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಅಲ್ಪಸ್ವಲ್ಪ ಸಾಲ ಪಡೆದು ಜೀವನ ಪೂರ್ತಿ ಬಡ್ಡಿ ಕಟ್ಟಿ ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಕೆಲ ಮಹಿಳೆಯರು ತಾಳಿ ಮಾರಾಟ ಮಾಡಿ ಬಡ್ಡಿ ತುಂಬಿದ್ದಾರೆ. ರಾಜ್ಯದಲ್ಲಿ ಸರ್ಕಾರ ಜೀವಂತೆ ಇದೆಯೇ ? ಮನುಷ್ಯತ್ವ ಇದೆಯೇ? ರಾಜ್ಯದಲ್ಲಿ ಏನು ನಡೆಯುತ್ತಿದೆ ಎನ್ನುವುದು ಸರ್ಕಾರಕ್ಕೆ ಗೊತ್ತಿಲ್ಲ ಎಂದ ಬಿಜೆಪಿ ನಾಯಕ ಪಿ. ರಾಜೀವ 

ಗದಗ(ಜ.25):  ರಾಜ್ಯ ಸರ್ಕಾರ ತಿಗಣೆಯಂತೆ ಜನರ ರಕ್ತ ಹೀರುತ್ತಿದೆ, ಅದರ ಮಧ್ಯ ಫೈನಾನ್ಸ್ ಕಾರ್ಪೊರೇಷನ್, ಮೈಕ್ರೋ ಫೈನಾನ್ಸ್‌ಗಳು ಅಮಾಯಕ ಹೆ ಣ್ಣುಮಕ್ಕಳಿಗೆ ಆರ್ಥಿಕ ಸಹಾಯ ಮಾಡುವ ಆಸೆ ತೋರಿಸಿ ಜೀವ ಹಿ೦ಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಪಿ. ರಾಜೀವ ಆರೋಪಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಅಲ್ಪಸ್ವಲ್ಪ ಸಾಲ ಪಡೆದು ಜೀವನ ಪೂರ್ತಿ ಬಡ್ಡಿ ಕಟ್ಟಿ ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಕೆಲ ಮಹಿಳೆಯರು ತಾಳಿ ಮಾರಾಟ ಮಾಡಿ ಬಡ್ಡಿ ತುಂಬಿದ್ದಾರೆ. ರಾಜ್ಯದಲ್ಲಿ ಸರ್ಕಾರ ಜೀವಂತೆ ಇದೆಯೇ ? ಮನುಷ್ಯತ್ವ ಇದೆಯೇ? ರಾಜ್ಯದಲ್ಲಿ ಏನು ನಡೆಯುತ್ತಿದೆ ಎನ್ನುವುದು ಸರ್ಕಾರಕ್ಕೆ ಗೊತ್ತಿಲ್ಲ ಎಂದರು. 

ಯತ್ನಾಳ್‌ ಸ್ವಿಚ್‌ ಬೇರೆ ಕಡೆ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ: ಪಿ. ರಾಜೀವ್

ಫೈನಾನ್, ಮೈಕೊ ಕಂಪನಿಗಳು ಯಾವ ರೀತಿ ಜನರ ಜೀವ ಹಿಂಡುತ್ತಿವೆ ಎನ್ನುವುದರ ಬಗ್ಗೆ ಸರ್ಕಾರ ಕಿಂಚಿತ್ತು ಗಮನ ನೀಡುತ್ತಿಲ್ಲ. ಸಿಎಂ ಅವರನ್ನು ಕೇಳಿದರೆ ಗೃಹ ಮಂತ್ರಿಗಳನ್ನು ಕೇಳುತ್ತೇನೆ ಎನ್ನು ತ್ತಾರೆ. ಕುರ್ಚಿ ಗುದ್ದಾಟದಲ್ಲಿ ರಾಜ್ಯದ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಜನಸಾಮಾನ್ಯರಿಗೆ ಯಮನ ರೀತಿಯಲ್ಲಿ ಮೈಕ್ರೋಫೈನಾನ್ಸ್, ಚಿಟ್ ಫಂಡ್ ಗಳು ಕಾಡುತ್ತಿವೆ. ಈ ಬಗ್ಗೆ ಸರ್ಕಾರ ತಕ್ಷಣ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ದಲಿತರಿಗೆ ಸಿಗಬೇಕಾದ ಭೂಮಿ ಕಿತ್ತುಕೊಂಡು, ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ: ಖರ್ಗೆ ವಿರುದ್ಧ ಪಿ ರಾಜೀವ್ ಕಿಡಿ

ಶ್ರೀರಾಮುಲು, ಜನಾರ್ದನ ರೆಡ್ಡಿ ಕುಚಿಕು ಸ್ನೇಹಿತರು

ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಕುಚಿಕು ಸ್ನೇಹಿತರು, ಗಂಡ ಹೆಂಡತಿ, ಸ್ನೇಹಿತರ ಮಧ್ಯ ಜಗಳ ಸಹಜ, ಬಹಳ ದಿನ ಜಗಳ ಇರೋದಿಲ್ಲ, ಅವರದ್ದು ಮಕ್ಕಳ ಜಗಳ ಇದ್ದ ಹಾಗೆ ಎಂದು ಬಿಜೆಪಿ ನಾಯಕ ಪಿ.ರಾಜೀವ ಹೇಳಿದರು. ರಾಮುಲು, ರೆಡ್ಡಿ ನಡುವೆ ಸ್ನೇಹದ ಜಗಳವಿದೆ. ಆದಷ್ಟು ಬೇಗ ಹಳೆಯ ಗೆಳೆತನ ಮುಂದುವರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ವಿಚಾರವಾಗಿ ಮಾತನಾಡಿದ ಅವರು. ಗೆಳೆಯರ ಮಧ್ಯದಲ್ಲಿ ಕಾಂಗ್ರೆಸ್ ರಾಜಕೀಯ ಬೆಳೆ ಬೇಯಿಸಿಕೊಳ್ಳೋದು ಒಳ್ಳೆಯದಲ್ಲ, ಸ್ನೇಹಿತರ ಮಧ್ಯದ ಜಗಳ ಬಳಕೆ ಮಾಡಿಕೊಳ್ಳುವಷ್ಟು ಕಾಂಗ್ರೆಸ್ ಗೆ ದುರ್ಗತಿ ಬಂದಿದೆ. ಶ್ರೀರಾಮುಲು ವಾಲ್ಮೀಕಿ ಸಮಾಜದ ಅಗ್ರಗಣ್ಯ ನಾಯಕ. ಈ ಜಗಳದ ಮೂಲಕ ಡಿ.ಕೆ. ಶಿವಕುಮಾರ್‌ಲಾಭ ಮಾಡಿಕೊಳ್ಳುವ ವಿಚಾರ ಮಾಡಿದ್ದರೆ, ಅದು ಡಿಕೆಶಿಯ ನೈತಿಕ ದಿವಾಳಿತನ ತೋರಿಸುತ್ತದೆ. ಬಿಜೆಪಿ ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ಗಮನಿಸುತ್ತದೆ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ