ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ನಿಜಬಣ್ಣ ಬಯಲು: ಪ್ರತಾಪಗೌಡ ಪಾಟೀಲ್

Published : Oct 19, 2023, 11:30 PM IST
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ನಿಜಬಣ್ಣ ಬಯಲು: ಪ್ರತಾಪಗೌಡ ಪಾಟೀಲ್

ಸಾರಾಂಶ

ರಾಜ್ಯದ ಜನರಿಗೆ ಬಿಟ್ಟಿ ಭಾಗ್ಯಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಜನರಿಗೆ ವಿದ್ಯುತ್ ಬರೆ ಎಳೆದಿದೆ. ಕಾಂಗ್ರೆಸ್ ಸರ್ಕಾರ ಬಡವರ ರೈತರ ರಕ್ತಹಿರುತ್ತಿದೆ. ರಾಜ್ಯದ ಜನರ ನೀರಿಕ್ಷೆಯನ್ನು ಹುಸಿಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಉತ್ತರಿಸಲಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳ ನಿಜಬಣ್ಣ ಬಯಲಾಗಲಿದೆ ಎಂದ ಪ್ರತಾಪಗೌಡ ಪಾಟೀಲ್ 

ಮಸ್ಕಿ(ಅ.19):  ಕಾಂಗ್ರೆಸ್ ಸರ್ಕಾರ ರೈತ ವಿರೋದಿ ನೀತಿ ಹಾಗೂ ಭ್ರಷ್ಟಾಚಾರವನ್ನು ಖಂಡಿಸಿ ಮಸ್ಕಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಿ ಶಿರಸ್ತೆದಾರ ಸಯ್ಯದ್ ಅಕ್ತರ್ ಅಲಿಗೆ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ರಾಜ್ಯದ ಜನರಿಗೆ ಬಿಟ್ಟಿ ಭಾಗ್ಯಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಜನರಿಗೆ ವಿದ್ಯುತ್ ಬರೆ ಎಳೆದಿದೆ. ಕಾಂಗ್ರೆಸ್ ಸರ್ಕಾರ ಬಡವರ ರೈತರ ರಕ್ತಹಿರುತ್ತಿದೆ. ರಾಜ್ಯದ ಜನರ ನೀರಿಕ್ಷೆಯನ್ನು ಹುಸಿಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಉತ್ತರಿಸಲಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳ ನಿಜಬಣ್ಣ ಬಯಲಾಗಲಿದೆ ಎಂದರು.

ನಂತರ ಮುಖಂಡ ಬಸವಂತರಾಯ ಕುರಿ ಮಾತನಾಡಿ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದಿರುವುದೇ ಲೂಟಿ ಹೊಡೆಯುದಕ್ಕಾಗಿ, ಉದಾರಹಣೆ ಎಂಬಂತೆ ಇತ್ತಿಚಿಗೆ ಐಟಿ ದಾಳಿಯಲ್ಲಿ ಸಿಕ್ಕ 100 ರು. ಕೋಟಿ ಹಣ. ಆದ್ದರಿಂದ ರಾಜ್ಯದ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸಿ ಎಂದರು.

ಮಾನ್ವಿ: ಕೌಟುಂಬಿಕ ಕಲಹಕ್ಕೆ ಮನನೊಂದು ಮೊಬೈಲ್ ಟವರ್ ಏರಿ ಕುಳಿತ ಯುವಕ!

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ್, ಮೌನೇಶ ಮುರಾರಿ, ಮೌನೇಶ ನಾಯಕ, ಚೇತನ್ ಪಾಟೀಲ್, ಶರಣಯ್ಯ ಸೊಪ್ಪಿಮಠ, ಸೂಗಣ್ಣ ಬಾಳೆಕಾಯಿ, ನಾಗರಾಜ ಸೇರಿದಂತೆ ಇತರರಿದ್ದರು.

ಬೈಕ್ ರ್‍ಯಾಲಿ:

ಮಸ್ಕಿ ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಿಂದ ಹಳೆಬಸ್ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ನಡೆಸಿದರು. ನಂತರ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲಲ್ಲಿ ಚುನಾವಣೆ
ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ