ಮೈತ್ರಿ ಸರ್ಕಾರ ಉರುಳಿಸಲು ಇವರಿಬ್ಬರೇ ಸಾಕಂತೆ: ಯಾರವರು..?

Published : Dec 07, 2018, 03:27 PM IST
ಮೈತ್ರಿ ಸರ್ಕಾರ ಉರುಳಿಸಲು ಇವರಿಬ್ಬರೇ ಸಾಕಂತೆ: ಯಾರವರು..?

ಸಾರಾಂಶ

ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಕಿಡಿಕಾರಿದ್ದು, ಮೈತ್ರಿ ಸರ್ಕಾರ ಉರುಳಿಸಲು ಇವರಿಬ್ಬರೇ ಸಾಕಂತೆ. ಹಾಗಾದ್ರೆ ಯಾರವರು..?

ಚಾಮರಾಜನಗರ (ಡಿ.7): ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಕಿಡಿಕಾರಿದ್ದಾರೆ.

(ಶುಕ್ರವಾರ) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ನಾವು ಬೀಳಿಸಲು ಹೋಗಲ್ಲ. ಆಪರೇಷನ್ ಕಮಲ ಮಾಡುವ ಅವಶ್ಯಕತೆಯೂ ಇಲ್ಲ. ತಾನಾಗಿಯೇ ಸರ್ಕಾರ ಪತನಗೊಳ್ಳಲಿದ್ದು, ಅಸಮಾಧಾನಿತ ಶಾಸಕರೇ ಸೂಸೈಡ್ ಬಾಂಬರ್ ಗಳಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಸರ್ಕಾರ ಬೀಳುವುದಕ್ಕೆ ಬಿಜೆಪಿ ಕಾರಣ ಆಗುವುದಿಲ್ಲ. ಬದಲಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾರಣರಾಗುತ್ತಾರೆ. ಇನ್ನು ಹೆಚ್.ಡಿ. ರೇವಣ್ಣ ವಿರುದ್ಧ ಕಿಡಿಕಾರಿದ ಅಶೋಕ್, ರೇವಣ್ಣ ಅವರು ಗುಳಿಕಾಲ ನೋಡಿ ಕೊಂಡೆ ಕೆಲಸ ಮಾಡ್ತಾರೆ.

ಜೇಬಿನಲ್ಲಿ ಯಾವಾಗಲು ನಿಂಬೆಹಣ್ಣು ಇಟ್ಟೊಕೊಂಡೆ ಇರ್ತಾರೆ. ಮೂಡನಂಬಿಕೆಗೆ ಕಟ್ಟುಬಿದ್ದು ವಿಧಾನಸೌಧಕ್ಕೆ ಚಪ್ಪಲೀನು ಹಾಕ್ಜೊಂಡು ಬರಲ್ಲ ಎಂದು ವ್ಯಂಗ್ಯವಾಡಿದರು.

ಆದ್ರೆ ಈಗ ರೇವಣ್ಣ ಅವರಿಗೆ ರಾಹುಕಾಲ ಬಂದಿದ್ದು, ಅವರ ಅಧಿಕಾರ ಹೋಗಲೇಬೇಕು. ರಾಹುಕಾಲ ಎದುರಾಗಿರುವುದರಿಂದ ಸರ್ಕಾರ ಉಳಿಸಲು ಯಾರಿಂದಲು ಸಾಧ್ಯವಿಲ್ಲ ಎಂದು ಆರ್.ಅಶೋಕ್ ಚಾಟಿ ಬೀಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!