ಕ್ಯಾಂಟೀನ್‌ ಹೆಸರು ಬದಲಾದ್ರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ? ಸಿ.ಟಿ.ರವಿ ಪ್ರಶ್ನೆ

Published : Aug 25, 2021, 06:18 PM IST
ಕ್ಯಾಂಟೀನ್‌ ಹೆಸರು ಬದಲಾದ್ರೆ  ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ? ಸಿ.ಟಿ.ರವಿ ಪ್ರಶ್ನೆ

ಸಾರಾಂಶ

* ಮತ್ತೆ ಮುನ್ನೆಲೆಗೆ ಬಂದ  ಇಂದಿರಾ ಕ್ಯಾಂಟೀನ್‌ ಹೆಸರು *  ಇಂದಿರಾ ಕ್ಯಾಂಟೀನ್‌  ಹೆಸರು ಬದಲಾವಣೆ ಮತ್ತೆ ಧ್ವನಿ ಎತ್ತಿದ ಸಿಟಿ ರವಿ * ಹೆಸರು ಬದಲಿಸುವುದು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಎಂದ ರವಿ

ಮಂಡ್ಯ, (ಆ.25): ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸುವುದು ಬಿಜೆಪಿಯ ಚುನಾವಣಾ ಪ್ರಣಾಳಿಕೆ. ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ ಅನ್ನ ಗಂಟಲಲ್ಲಿ ಇಳಿಯುವುದಿಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಇಂದು (ಆ.25) ಮಂಡ್ಯದಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿ ಭಾವಚಿತ್ರ ಇರುವ ಕಾರಣ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ನಾಮಕರಣ ಮಾಡುವ ಬಗ್ಗೆ ಮಾತನಾಡಿದ್ದೇನೆ. ಅನ್ನಪೂರ್ಣೇಶ್ವರಿ ಪಾರ್ವತಿಯ ಅಂಶ, ಹೆಸರು ಬದಲಾದರೂ ಬಡವರಿಗೆ ಅನ್ನ ನೀಡುವ ಉದ್ದೇಶ ಮುಂದುವರಿಯಲಿದೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಾವು ಬಳೆ ತೊಟ್ಟು ಕೂತಿಲ್ಲ, ಮುಂದೆ ಏನಾಗುತ್ತೋ ನೋಡ್ಲಿ: ಡಿಕೆಶಿ ಸವಾಲು

ಒಂದೇ ಕುಟುಂಬ ಸದಸ್ಯರು ನೂರಾರು ಯೋಜನೆಗಳಗೆ ತಮ್ಮದೇ ಹೆಸರು ಇಟ್ಟುಕೊಂಡಿದ್ದಾರೆ. ಜವಹರಲಾಲ್‌ ನೆಹರೂ, ಇಂದಿರಾಗಾಂಧಿ ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡಲು 1989- 90ರವರೆಗೆ ಕಾಯಬೇಕಾಯಿತು. ನಮ್ಮ ಬೆಂಬಲದೊಂದಿಗೆ ರಚನೆಯಾಗಿದ್ದ ವಿ.ಪಿ.ಸಿಂಗ್‌ ಸರ್ಕಾರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪ್ರಸ್ತಾವದ ಮೇರೆಗೆ ಅಂಬೇಡ್ಕರ್‌ ಅವರಿಗೆ ಭಾರತರತ್ನ ನೀಡಲಾಯಿತು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಮೂಲಕ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸುವುದು ಶತಸಿದ್ಧ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ