ಬಿಜೆಪಿ ಜೊತೆಗೆ ಧೃಡವಾಗಿದ್ದೇನೆ, ಕಾಂಗ್ರೆಸ್ ಸೇರ್ಪಡೆ ಸುದ್ದಿ ತಳ್ಳಿ ಹಾಕಿದ ತೇಜಸ್ವಿನಿ ಅನಂತಕುಮಾರ್‌

Published : Jul 17, 2023, 11:03 AM ISTUpdated : Jul 17, 2023, 12:37 PM IST
ಬಿಜೆಪಿ  ಜೊತೆಗೆ ಧೃಡವಾಗಿದ್ದೇನೆ, ಕಾಂಗ್ರೆಸ್ ಸೇರ್ಪಡೆ ಸುದ್ದಿ ತಳ್ಳಿ ಹಾಕಿದ ತೇಜಸ್ವಿನಿ ಅನಂತಕುಮಾರ್‌

ಸಾರಾಂಶ

ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್‌ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಬೆಂಗಳೂರು (ಜು.17): ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್‌ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ  ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತೇಜಸ್ವಿನಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಸುದ್ದಿ ಹಬ್ಬಿತ್ತು.

ಪ್ರತಿಪಕ್ಷಗಳಿಗೆ ಸಡ್ಡು: ನಾಳೆ ದಿಲ್ಲಿಯಲ್ಲಿ ಎನ್‌ಡಿಎ ಬಲ ಪ್ರದರ್ಶನ; 30 ರಾಜಕೀಯ ಪಕ್ಷಗ

ವಿಧಾನಸಭೆ ಚುನಾವಣೆ ವೇಳೆ ಜಗದೀಶ್ ಶೆಟ್ಟರ್ , ಲಕ್ಷ್ಮಣ್ ಸವದಿ ಸೇರಿ ಹಲವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಶಾಕ್ ಕೊಟ್ಟಿದ್ದರು.  ಹೀಗಾಗಿ ಕಳೆದೆರಡು ದಿನಗಳ ಹಿಂದೆ  ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಸುದ್ದಿ ಹಬ್ಬಿತ್ತು. ತೇಜಸ್ವಿನಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಜಗದೀಶ್‌ ಶೆಟ್ಟರ್‌ ಮುಖ್ಯ ಸೇತುವೆ ಎನ್ನಲಾಗಿತ್ತು. ಇವೆಲ್ಲ ಊಹಾಪೋಹಗಳಿಗೆ ಇಂದು ತೆರೆ ಬಿದ್ದಿದೆ.

ಇಂದು ಕೇಂದ್ರ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆ: ಮೀಟಿಂಗ್‌ನಲ್ಲಿ ಈ 6 ವಿಚಾರಗಳ ಚರ್ಚೆ; ಇಲ್ಲಿದೆ

ಇನ್ನು ಬಿಜೆಪಿಯಿಂದ 6 ಬಾರಿ ಗೆದ್ದು ಸಂಸದರಾಗಿದ್ದ ಅನಂತಕುಮಾರ್‌ ಅವರ ನಿಧನದ ನಂತರ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರನ್ನು 2018ರ ಲೋಕಸಭೆ ಚುನಾವಣೆಗೆ ನಿಲ್ಲಿಸಲು ತಯಾರಿ ನಡೆದಿತ್ತು. ಆದರೆ, ಕಾರಣಾಂತರಗಳಿಂದ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್‌ ನೀಡಿತ್ತು.  ಲೋಕಸಭೆಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ತೇಜಸ್ವಿನಿ ನಿರಾಸೆಯಾಗಿದ್ದರು. ಬಳಿಕ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿಗೆ ಬಿಜೆಪಿ ಟಿಕೆಟ್ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?