ನಾನು ಹಿರಿಯ, ಸಚಿವ ಸ್ಥಾನ ಬೇಕು : ಬಿಜೆಪಿ ಮುಖಂಡ

Kannadaprabha News   | stockphoto
Published : Nov 13, 2020, 07:20 AM IST
ನಾನು ಹಿರಿಯ, ಸಚಿವ ಸ್ಥಾನ ಬೇಕು : ಬಿಜೆಪಿ ಮುಖಂಡ

ಸಾರಾಂಶ

ಉಪ ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತಲೇ ಇದೀಗ ಇನ್ನೋರ್ವ ಮುಖಂಡ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 

ಬೆಂಗಳೂರು (ನ.13):  ಸಚಿವ ಸಂಪುಟ ಪುನಾರಚನೆ ಮಾಡಿದರೆ ಒಳ್ಳೆಯದಾಗಿದ್ದು, ಹಿರಿಯನಾಗಿರುವ ಕಾರಣ ಸಚಿವ ಸ್ಥಾನ ಕೇಳಿದ್ದೇನೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ವೈದ್ಯಕೀಯ ಕಾಲೇಜು ನೀಡಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. 

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಂಪುಟ ಪುನಾರಚನೆ ಮಾಡಿದರೆ ಒಳ್ಳೆಯದು. ಹಿರಿಯ ಶಾಸಕನಾಗಿರುವ ಕಾರಣ ಸಚಿವ ಸ್ಥಾನ ಕೇಳಿದ್ದೇನೆ. ಆದರೆ, ಈಗ ನಮಗೆ ಅದು ಮುಖ್ಯವಲ್ಲ. ಯಾಕೆಂದರೆ ನಮಗೆ ವೈದ್ಯಕೀಯ ಕಾಲೇಜು ಬಂದಿರುವುದು ಸಚಿವ ಸ್ಥಾನ ಸಿಕ್ಕಿದಷ್ಟೇ ಖುಷಿ ತಂದಿದೆ’ ಎಂದಿದ್ದಾರೆ.

ವೈರಲ್ ಆಯ್ತು ಸಿಎಂ BSY‌ ಭಾಷಣದ ತುಣುಕು : ಅದರಲ್ಲೇನಿತ್ತು..?

ನಾನು ಪದೇ ಪದೇ ಹೋಗಿ ಮುಖ್ಯಮಂತ್ರಿಗೆ ಮುಜುಗರ ಮಾಡಲ್ಲ. ನನ್ನ ಹಿರಿತನದ ಆಧಾರದ ಮೇಲೆ ನನಗೆ ಸಚಿವ ಸ್ಥಾನ ಕೊಡುವ ಭರವಸೆ ಇದೆ’ ಎಂದರು.

ಶಾಸಕಿ ಪೂರ್ಣಿಮಾ ಶ್ರೀನಿವಾಸ ಮಾತನಾಡಿ, ‘ಸಚಿವರಾಗಬೇಕು ಎಂಬುದು ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಆದರೆ, ಯಾರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವುದು ಪಕ್ಷ ತೀರ್ಮಾನ ಮಾಡಲಿದೆ. ಪಕ್ಷ ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್