ಯಡಿಯೂರಪ್ಪರನ್ನು ಕಡೆಗಣಿಸದಿದ್ರೆ ನಾವೇ ಅಧಿಕಾರದಲ್ಲಿರುತ್ತಿದ್ದೆವು: ವಿಜುಗೌಡ ಪಾಟೀಲ

Published : Nov 12, 2023, 12:31 PM IST
ಯಡಿಯೂರಪ್ಪರನ್ನು ಕಡೆಗಣಿಸದಿದ್ರೆ ನಾವೇ ಅಧಿಕಾರದಲ್ಲಿರುತ್ತಿದ್ದೆವು: ವಿಜುಗೌಡ ಪಾಟೀಲ

ಸಾರಾಂಶ

ಯಡಿಯೂರಪ್ಪನವರು ಸೈಕಲ್ ತುಳಿದು ಪಕ್ಷವನ್ನು ಈ ಮಟ್ಟಕ್ಕೆ ತಂದಿದ್ದಾರೆ. ಈಗ ಅವರ ಮಗನೇ ರಾಜ್ಯಾಧ್ಯಕ್ಷರಾಗಿದ್ದು ಖುಷಿಯ ವಿಷಯ. ವಿಜಯೇಂದ್ರ ತಂದೆಯ ನೆರಳಲ್ಲೇ ಬೆಳೆದಿದ್ದರೂ, ಸ್ವಂತ ಶ್ರಮದಿಂದ ಮೇಲೆ ಬಂದಿದ್ದಾರೆ. ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಕಾರ್ಯಕರ್ತರಿಗೆ ಹಬ್ಬದ ಉಡುಗೊರೆ ನೀಡಿದಂತಾಗಿದೆ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ 

ವಿಜಯಪುರ(ನ.11): ಯಡಿಯೂರಪ್ಪರನ್ನು ಕಳೆದ ಚುನಾವಣೆಯಲ್ಲಿ ಕಡೆಗಣಿಸದಿದ್ರೆ ನಾವೇ ಅಧಿಕಾರದಲ್ಲಿರುತ್ತಿದ್ದೆವು. ಈಗ ಆ ತಪ್ಪಿನ ಅರಿವಾಗಿದೆ. ಯಡಿಯೂರಪ್ಪರಿಂದ ಬಿಜೆಪಿ ರಾಜ್ಯದಲ್ಲಿ ನೆಲೆ ನಿಂತಿದೆ. ವಿಜಯೇಂದ್ರ ಅದೇ ದಾರಿಯಲ್ಲಿ ಮುಂದುವರಿದು ಪಕ್ಷ ಸಂಘಟಿಸಲಿದ್ದಾರೆ. ಯುವಕರಲ್ಲಿ ಉತ್ಸಾಹ ಮೂಡಿದೆ. ಅವರ ಸಂಘಟನಾ ಶಕ್ತಿಯಿಂದ ಪಕ್ಷಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಸೈಕಲ್ ತುಳಿದು ಪಕ್ಷವನ್ನು ಈ ಮಟ್ಟಕ್ಕೆ ತಂದಿದ್ದಾರೆ. ಈಗ ಅವರ ಮಗನೇ ರಾಜ್ಯಾಧ್ಯಕ್ಷರಾಗಿದ್ದು ಖುಷಿಯ ವಿಷಯ. ವಿಜಯೇಂದ್ರ ತಂದೆಯ ನೆರಳಲ್ಲೇ ಬೆಳೆದಿದ್ದರೂ, ಸ್ವಂತ ಶ್ರಮದಿಂದ ಮೇಲೆ ಬಂದಿದ್ದಾರೆ. ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಕಾರ್ಯಕರ್ತರಿಗೆ ಹಬ್ಬದ ಉಡುಗೊರೆ ನೀಡಿದಂತಾಗಿದೆ ಎಂದರು.

ಸಿಎಂ ಬದಲಾವಣೆ ವಿಷಯವೇ ಅಪ್ರಸ್ತುತ: ಶಾಸಕ ಯಶವಂತರಾಯಗೌಡ

ಕಾಂಗ್ರೆಸ್ ಹೇಳುವಂತೆ ಇದು ಅಪ್ಪ-ಮಕ್ಕಳ ರಾಜಕಾರಣ ಅಲ್ಲ. ಬಿಜೆಪಿ ಕಾರ್ಯಕರ್ತರ ಪಕ್ಷ. ವಿಜಯೇಂದ್ರ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ಯುವ ಮೋರ್ಚಾ ಅಧ್ಯಕ್ಷ ಹಾಗೂ ಪಕ್ಷದ ಉಪಾಧ್ಯಕ್ಷರಾಗಿ ಈಗ ಈ ಮಟ್ಟಕ್ಕೆ ತಲುಪಿದ್ದಾರೆ. ಕುಟುಂಬ ರಾಜಕಾರಣದ ಮಾತನಾಡುವವರು ತಮ್ಮ ಮಕ್ಕಳನ್ನು ಬೆಳೆಸುತ್ತಿಲ್ಲವೇ ಎಂದು ಪ್ರಶ್ನಿಸಿದ ವಿಜುಗೌಡ, ಈ ಬದಲಾವಣೆಯಿಂದ ಕಾಂಗ್ರೆಸ್ ನಾಯಕರಿಗೆ ಆತಂಕ ಶುರುವಾಗಿದ್ದಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ. ತನ್ನ ತಪ್ಪುಗಳನ್ನು ಆ ಪಕ್ಷ ಸರಿ ಮಡಿಕೊಳ್ಳಲಿ. ಕೊಟ್ಟಿರುವ ಗ್ಯಾರಂಟಿಗಳನ್ನು ಪೂರೈಸಿ ಜನಕ್ಕೆ ಒಳ್ಳಯದು ಮಾಡಲಿ ಎಂದು ಹೇಳಿದರು.

ಪಕ್ಷದ ವಕ್ತಾರ ಸುರೇಶಗೌಡ ಬಿರಾದಾರ ಮಾತನಾಡಿ, ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರಿಗೆ ಅಧಿಕಾರದ ದಾಹವಿದೆ. ಅವರ ಪಕ್ಷದಲ್ಲಿರುವಂತೆ ಯಾರನ್ನೋ ತಂದು ಇಲ್ಲಿ ಅಧಿಕಾರಕ್ಕೆ ಏರಿಸಲ್ಲ. ದುಡಿಯುವವರಿಗೆ, ಕಾರ್ಯಕರ್ತರಿಗೆ ಬಿಜೆಪಿಯಲ್ಲಿ ಮನ್ನಣೆ ಇದೆ ಎಂದು ಹೇಳಿದರು. ಈ ವೇಳೆ ಪಕ್ಷದ ಬಬಲೇಶ್ವರ ಮಂಡಲದ ಅಧ್ಯಕ್ಷ ವಿಠ್ಠಲ ಕಿರಸೂರು, ಸಾಮಾಜಿಕ ಜಾಲ ತಾಣದ ಸಂಚಾಲಕ ಸಂದೀಪ ಪಾಟೀಲ, ಮಾಧ್ಯಮ ಸಂಚಾಲಕ ವಿಜಯ ಜೋಷಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್