ವಿಜಯೇಂದ್ರಗೆ ಡಿಸಿಎಂ ಪಟ್ಟ, ಬಿಎಸ್‌ವೈ ಗೌರ್ನರ್‌ : ಗುಸುಗುಸು

Kannadaprabha News   | Asianet News
Published : Jul 18, 2021, 07:32 AM IST
ವಿಜಯೇಂದ್ರಗೆ ಡಿಸಿಎಂ ಪಟ್ಟ, ಬಿಎಸ್‌ವೈ ಗೌರ್ನರ್‌ : ಗುಸುಗುಸು

ಸಾರಾಂಶ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ  ಗುಸುಗುಸು ಯಡಿಯೂರಪ್ಪಗೆ ಗವರ್ನರ್ ಪೋಸ್ಟ್, ವಿಜಯೇಂದ್ರಗೆ ಡಿಸಿಎಂ ಪಟ್ಟ ಎನ್ನುವ ಸದ್ದು ಬಿಜೆಪಿ ಮುಖಂಡರಿಂದ ಸುದ್ದಿಗೆ ಸ್ಪಷ್ಟನೆ 

 ಬೆಂಗಳೂರು (ಜು.18):  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರಿಗೆ ತಕ್ಷಣ ರಾಜೀನಾಮೆ ನೀಡಲು ಸೂಚಿಸುತ್ತಾರೆ, ಯಡಿಯೂರಪ್ಪ ಅವರನ್ನು ಪಶ್ಚಿಮ ಬಂಗಾಳಕ್ಕೆ ರಾಜ್ಯಪಾಲರನ್ನಾಗಿ ನಿಯುಕ್ತಿಗೊಳಿಸಲಾಗುತ್ತದೆ, ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬಿತ್ಯಾದಿ ವದಂತಿಗಳು ಬಲವಾಗಿ ಕೇಳಿಬಂದವು. ರಾಷ್ಟ್ರೀಯ ಮಾಧ್ಯಮಗಳೂ ಈ ಕುರಿತು ವರದಿ ಪ್ರಸಾರ ಮಾಡಿ ಇದಕ್ಕೆ ಪುಷ್ಟಿನೀಡಿದವು.

ಸಿಎಂಗೆ ವರಿಷ್ಠರಿಂದ ಮೂರು ಟಾರ್ಗೆಟ್‌!

ಆದರೆ, ಅದೆಲ್ಲವೂ ಸುಳ್ಳು. ಕೇವಲ ಊಹಾಪೋಹಗಳಿಂದ ಕೂಡಿವೆ ಹೊರತು ವಾಸ್ತವ ಅಲ್ಲ ಎಂದು ಪಕ್ಷದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ನಾಯಕತ್ವ ಬದಲಾವಣೆ ಕುರಿತು ತಕ್ಷಣವೇ ನಿರ್ಧಾರ ಕೈಗೊಳ್ಳುವ ಹಂತ ಇನ್ನೂ ಬಂದಿಲ್ಲ. ಆ ಸಂದರ್ಭ ಬಂದಾಗ ನೋಡೋಣ. ಸದ್ಯಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಸಲಾಗುವುದು ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನಕ್ಕೆ ವಿರುದ್ಧ: ಸಂಸದ ಬೊಮ್ಮಾಯಿ
ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ