
ಉಡುಪಿ(ಡಿ.01): ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಪಂಚಾಯಿತಿ ಸದಸ್ಯರಿಬ್ಬರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಯ ಅಧಿಕೃತ ಅಧ್ಯಕ್ಷೆ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ ಮಾಲತಿ ಸಂದೀಪ್ ಅವರು ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷರಾಗಿದ್ದಾರೆ. ಅದೇ ರೀತಿ ಗಿರೀಶ್ ಸುವರ್ಣ ಬಿಜೆಪಿ ಬೆಂಬಲದಲ್ಲಿ ಮೂರು ಬಾರಿ ಗ್ರಾ.ಪಂ. ಸದಸ್ಯರಾಗಿದ್ದಾರೆ. ಅವರಿಬ್ಬರೂ ಬಿಜೆಪಿ ತ್ಯಜಿಸಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಪ್ರಧಾನಿ ಮೋದಿ ಯೋಜನೆಗೆ ಸಿದ್ದರಾಮಯ್ಯ ತಡೆ: ಶೋಭಾ ಕರಂದ್ಲಾಜೆ ಕಿಡಿ
ಅವರನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ರೋಯ್ಸ್ ಫರ್ನಾoಡೀಸ್ ಮುಂತಾದವರು ಪಕ್ಷಕ್ಕೆ ಸ್ವಾಗತಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.